<p><strong>ಶಿವಮೊಗ್ಗ:</strong>ಕೇಂದ್ರ ಸರ್ಕಾರಜಾರಿಗೆ ತಂದಿರುವ ನೂತನಪೌರತ್ವ ಕಾಯ್ದೆವಿರೋಧಿಸಿ ಮುತ್ತಹಿದ ಮಹಾಝ್ ಸಂಘಟನೆ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿ, ರಾಷ್ಟ್ರಪತಿ ಅಂಕಿತ ಹಾಕಿರುವ ಈಕಾಯ್ದೆ ಸಂವಿಧಾನದ ಆಶಯದ ವಿರುದ್ಧವಾಗಿದೆ. ದೇಶದ ನೈತಿಕ, ಸಂವಿಧಾನಿಕ, ಜಾತ್ಯತೀತ ಪರಂಪರೆಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ಕಾಯ್ದೆಯ ಹಿಂದೆ ಕೋಮು ಧ್ರುವೀಕರಣ ಮತ್ತು ಮುಸ್ಲಿಮರನ್ನು ಬಲಿಪಶುಗಳನ್ನಾಗಿಸುವ ಹುನ್ನಾರಅಡಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶವೂ ಅಡಗಿದೆ. ದೇಶದ ಆರ್ಥಿಕ ಹಾಗೂ ರಾಜಕೀಯ ಪರಿಸ್ಥಿತಿ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದುಆರೋಪಿಸಿದರು.</p>.<p>ಸಂಘಟನೆಯ ಮುಖಂಡರಾದ ಪರ್ವೀಜ್ ಅಹಮದ್, ಎಚ್.ಕೆ.ಅಬ್ದುಲ್ ವಾಜೀದ್, ಹಾಮೀದ್ ಮತ್ತು ಇಕ್ಬಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong>ಕೇಂದ್ರ ಸರ್ಕಾರಜಾರಿಗೆ ತಂದಿರುವ ನೂತನಪೌರತ್ವ ಕಾಯ್ದೆವಿರೋಧಿಸಿ ಮುತ್ತಹಿದ ಮಹಾಝ್ ಸಂಘಟನೆ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿ, ರಾಷ್ಟ್ರಪತಿ ಅಂಕಿತ ಹಾಕಿರುವ ಈಕಾಯ್ದೆ ಸಂವಿಧಾನದ ಆಶಯದ ವಿರುದ್ಧವಾಗಿದೆ. ದೇಶದ ನೈತಿಕ, ಸಂವಿಧಾನಿಕ, ಜಾತ್ಯತೀತ ಪರಂಪರೆಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ಕಾಯ್ದೆಯ ಹಿಂದೆ ಕೋಮು ಧ್ರುವೀಕರಣ ಮತ್ತು ಮುಸ್ಲಿಮರನ್ನು ಬಲಿಪಶುಗಳನ್ನಾಗಿಸುವ ಹುನ್ನಾರಅಡಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶವೂ ಅಡಗಿದೆ. ದೇಶದ ಆರ್ಥಿಕ ಹಾಗೂ ರಾಜಕೀಯ ಪರಿಸ್ಥಿತಿ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದುಆರೋಪಿಸಿದರು.</p>.<p>ಸಂಘಟನೆಯ ಮುಖಂಡರಾದ ಪರ್ವೀಜ್ ಅಹಮದ್, ಎಚ್.ಕೆ.ಅಬ್ದುಲ್ ವಾಜೀದ್, ಹಾಮೀದ್ ಮತ್ತು ಇಕ್ಬಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>