ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಅಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Last Updated 7 ಫೆಬ್ರುವರಿ 2020, 12:09 IST
ಅಕ್ಷರ ಗಾತ್ರ

ಶಿವಮೊಗ್ಗ: ಮಹಾತ್ಮ ಗಾಂಧೀಜಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ದಕ್ಷಿಣ ಮತ್ತು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಕಾರ್ಯಕರ್ತರು ಶುಕ್ರವಾರಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ,ಪ್ರತಿಭಟನೆ ನಡೆಸಿದರು.

ಅನಂತ್ ಕುಮಾರ್ ಹೆಗಡೆದೇಶದ್ರೋಹದ ಹೇಳಿಕೆನೀಡಿದ್ದಾರೆ. ಗಾಂಧೀಜಿ ಮಹಾಪುರುಷ. ಸ್ವಾತಂತ್ರ್ಯಕ್ಕಾಗಿ ಹೊರಾಡಿದ ಮಹಾತ್ಮ.ಅಂತಹವರ ಕುರಿತು ನೀಡಿದ ಹೇಳಿಕೆಖಂಡನೀಯ.ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಹಿಂದೆ ರಾಷ್ಟ್ರದ ಪವಿತ್ರ ಗ್ರಂಥ, ಸಂವಿಧಾನವನ್ನೇ ಬುಡಮೇಲು ಮಾಡುವ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದರು. ಅವರ ವರ್ತನೆ, ಅವಿವೇಕತನದಿಂದ ಕೂಡಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡರಾದ ಪಂಡಿತ್ ವಿ.ವಿಶ್ವನಾಥ್, ಬಿ.ನಾಗರಾಜ್, ಎನ್.ರಮೇಶ್, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಎಚ್.ಸಿ.ಯೋಗೀಶ್‌,ರಾಮೇಗೌಡ, ಕೆ.ರಂಗನಾಥ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT