ಶಿವಮೊಗ್ಗ: ಮಹಾತ್ಮ ಗಾಂಧೀಜಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ದಕ್ಷಿಣ ಮತ್ತು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಕಾರ್ಯಕರ್ತರು ಶುಕ್ರವಾರಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ,ಪ್ರತಿಭಟನೆ ನಡೆಸಿದರು.
ಅನಂತ್ ಕುಮಾರ್ ಹೆಗಡೆದೇಶದ್ರೋಹದ ಹೇಳಿಕೆನೀಡಿದ್ದಾರೆ. ಗಾಂಧೀಜಿ ಮಹಾಪುರುಷ. ಸ್ವಾತಂತ್ರ್ಯಕ್ಕಾಗಿ ಹೊರಾಡಿದ ಮಹಾತ್ಮ.ಅಂತಹವರ ಕುರಿತು ನೀಡಿದ ಹೇಳಿಕೆಖಂಡನೀಯ.ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಹಿಂದೆ ರಾಷ್ಟ್ರದ ಪವಿತ್ರ ಗ್ರಂಥ, ಸಂವಿಧಾನವನ್ನೇ ಬುಡಮೇಲು ಮಾಡುವ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದರು. ಅವರ ವರ್ತನೆ, ಅವಿವೇಕತನದಿಂದ ಕೂಡಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡರಾದ ಪಂಡಿತ್ ವಿ.ವಿಶ್ವನಾಥ್, ಬಿ.ನಾಗರಾಜ್, ಎನ್.ರಮೇಶ್, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಎಚ್.ಸಿ.ಯೋಗೀಶ್,ರಾಮೇಗೌಡ, ಕೆ.ರಂಗನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.