ದಾವಣಗೆರೆಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಒಬ್ಬರು ದೇಶದಲ್ಲಿನ ಭ್ರಷ್ಟಾಚಾರ ಸರ್ಕಾರದ ಬಗ್ಗೆ ಮಾತನಾಡುತ್ತಾ ಕರ್ನಾಟಕ ಸರ್ಕಾರಕ್ಕೆ ಮೊದಲ ಸ್ಥಾನ ನೀಡಿದ್ದಾರೆ ಎಂದು ಹೇಳಲು ಹೋಗಿ , ಯಡಿಯೂರಪ್ಪ ಹೆಸರು ಉಲ್ಲೇಖಿಸಿದರು.
ಪಕ್ಕದಲ್ಲಿದ್ದ ಸಂಸದ ಪ್ರಹ್ಲಾದ ಜೋಶಿ ಮತ್ತು ಯಡಿಯೂರಪ್ಪ, ಸಿದ್ದರಾಮಯ್ಯ ಸರ್ಕಾರ ಎಂದು ಹೇಳುವಂತೆ ಕಿವಿಯಲ್ಲಿ ಉಸುರಿದರು.
ಆಗ ಶಾ, ತಪ್ಪನ್ನು ತಿದ್ದಿಕೊಂಡರು.