ಶಿವಮೊಗ್ಗ: ಎನ್ಇಎಸ್ ಕಾಲೇಜು ಆವರಣದಲ್ಲಿಡಿ.21ರ ಬೆಳಿಗ್ಗೆ 11ಕ್ಕೆ ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್,ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯಅವರ ನೆನಪಿನ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ವಿಶ್ವವಾಣಿಜ್ಯ ಒಪ್ಪಂದ ಮತ್ತು ಆರ್ಸಿಇಪಿ ಒಪ್ಪಂದಗಳು ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಆಘಾತ ನೀಡಿವೆ.ಬಗರ್ಹುಕುಂ ಸಮಸ್ಯೆಗಳು ತಾರ್ಕಿಕ ಅಂತ್ಯ ಕಾಣದೆರೈತರು ಪರಿತಪಿಸುತ್ತಿದ್ದಾರೆ. ಈ ಕುರಿತು ಅಂದು ಸುದೀರ್ಘ ಚರ್ಚೆ ನಡೆಸಿಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದುರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಕೆ.ಟಿ.ಗಂಗಾಧರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹಾಲು ಉತ್ಪಾದಕ ಮಹಿಳೆಯರುಕಾರ್ಯಕ್ರಮ ಉದ್ಘಾಟಿಸುವರು.ಕಾಟೀಕೆರೆಸರ್ಕಾರಿಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರೈತ ಗೀತೆ ಹಾಡುವರು. ಪ್ರಗತಿಪರ ಬರಹಗಾರ,ಚಿಂತಕ ಶಿವಸುಂದರ್ ಮತ್ತು ಮಹಿಳಾ ರೈತ ಮುಖಂಡರಾದನಂದಿನಿ ಜಯರಾಮ್ ಅವರು ಆರ್ಸಿಇಪಿಒಪ್ಪಂದದಿಂದ ಭಾರತದ ಕೃಷಿ ಮತ್ತು ಹೈನು ಉದ್ಯಮದ ಮೇಲಾಗುವ ಪರಿಣಾಮಗಳ ಕುರಿತು ವಿಷಯ ಮಂಡನೆ ಮಾಡುವರು ಎಂದು ವಿವರ ನೀಡಿದರು.
ವಿಶೇಷ ಆಹ್ವಾನಿತರಾಗಿ ಸುನಿತಾ ಪುಟ್ಟಣ್ಣಯ್ಯ, ಚುಕ್ಕಿನಂಜುಂಡಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಪಚ್ಚೆ ನಂಜುಂಡಸ್ವಾಮಿ, ಎನ್.ಎಸ್.ಸುಧಾಂಶು ಭಾಗವಹಿಸುವರು ಎಂದರು.
ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಆರ್ಸಿಇಪಿಒಪ್ಪಂದ ಕುರಿತು ಚರ್ಚಿಸಬೇಕು. ಸ್ಪಷ್ಟ ನಿಲುವು ಪ್ರಕಟಿಸಬೇಕು.ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ್ದ ರೈತರ ಸಾಲ ಮನ್ನಾಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ವಿವರ ನೀಡಿದರು.