ಮುಂಜಾನೆ ತಂದೆ ಬಿ.ಎಸ್. ಯಡಿಯೂರಪ್ಪ ಜತೆ ಚನ್ನಳ್ಳಿ ಗ್ರಾಮ ಸಮೀಪವಿರುವ ತಮ್ಮ ತೋಟಕ್ಕೆ ತೆರಳಿ ವಾಯುವಿಹಾರ ನಡೆಸಿದರು. ನಂತರ ಕುಟುಂಬ ಸದಸ್ಯರೊಂದಿಗೆ ಬೆಳಿಗ್ಗೆ ಉಪಹಾರ ಸ್ವೀಕರಿಸಿ ಸ್ವಲ್ಪ ಸಮಯ ವಿಶ್ರಾಂತಿ ಪಡೆದರು. ಕೆಲ ನಿಮಿಷ ತಂದೆ ಯಡಿಯೂರಪ್ಪ ಜತೆ ಚರ್ಚೆ ನಡೆಸಿದರು. ನಂತರ ತಮ್ಮ ನಿವಾಸಕ್ಕೆ ಬಂದಿದ್ದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.