<p>ರಾಯಚೂರು: ಜಿಲ್ಲೆಯದಾದ್ಯಂತ 5ನೇ ದಿನದ ಗಣೇಶ ವಿಸರ್ಜನೆ ಅದ್ದೂರಿ ಮೆರವಣಿಗೆಯೊಂದಿಗೆ ನೆರವೇರಿತು.</p>.<p>ನಗರದಲ್ಲಿ ಬುಧವಾರ ರಾತ್ರಿ ಸುಮಾರು 10 ಗಂಟೆಯಿಂದ ಗುರುವಾರ ಬೆಳಿಗ್ಗೆ 11 ಗಂಟೆಯ ವರೆಗೆ ಮೆರವಣಿಗೆ ನಡೆಯಿತು. ಡಿ.ಜೆ ನಿಷೇಧ ಮಾಡಿದರೂ ಅನೇಕ ಗಜಾನನ ಮಂಡಳಿಗಳು ಬೃಹತ್ ಗಾತ್ರದ ಸೌಂಡ್ ಸಿಸ್ಟಂನೊಂದಿಗೆ ಭವ್ಯವಾದ ಮೆರವಣಿಗೆ ಮೂಲಕ ಗಣನಾಯಕನಿಗೆ ವಿದಾಯ ಹೇಳಿದವು.</p>.<p>ಯುವಕರು ಡಿ.ಜೆ ಹಾಡಿಗೆ ಕುಣಿದು ಕುಪ್ಪಳಿಸಿದರು. ಪರಸ್ಪರ ಬನ್ಣ ಎರಚಿಕೊಂಡು ಗಣಪತಿ ಬಪ್ಪ ಮೋರಯಾ ಘೊಷಣೆ ಹಾಕಿ ಮೆರವಣಿಗೆಯಲ್ಲಿ ಸಾಗಿದರು.</p>.<p>ನಗರದ ವ್ಯಾಪ್ತಿಯ ಗಣೇಶಗಳನ್ನು ಖಾಸಭಾವಿಯಲ್ಲಿ ವಿಸರ್ಜನೆ ಮಾಡಲಾಯಿತು. ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ನಗರದ 389 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1015 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯಿತು.</p>.<p>ಬಿಗಿ ಬಂದೋಬಸ್ತ್: ಗಣೇಶ ವಿಸರ್ಜನೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ 4 ಕೆಎಆರ್ ಪಿ ತುಕಡಿ, 9ಡಿಆರ್ ಪಿ, , ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 3 ಡಿಎಸ್ ಪಿ, 16 ಇನ್ಸ್ ಪೆಕ್ಟರ್, 60 ಸಬ್ ಇನ್ಸ್ ಪೆಕ್ಟರ್, 1050 ಎಎಸ್ ಐ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು 500 ಗೃಹ ರಕ್ಷಕದಳದವರನ್ನು ನಿಯೋಜಿಸಲಾಗಿತ್ತು.</p>.<p>ಗಾಜಗಾರಪೇಟೆಯಿಂದ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ಮಾವಿನಕೆರೆಗೆ ಬರುತ್ತಿದ್ದಂತೆ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಪೊಲೀಸರು ಲಾಠಿ ಬೀಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಜಿಲ್ಲೆಯದಾದ್ಯಂತ 5ನೇ ದಿನದ ಗಣೇಶ ವಿಸರ್ಜನೆ ಅದ್ದೂರಿ ಮೆರವಣಿಗೆಯೊಂದಿಗೆ ನೆರವೇರಿತು.</p>.<p>ನಗರದಲ್ಲಿ ಬುಧವಾರ ರಾತ್ರಿ ಸುಮಾರು 10 ಗಂಟೆಯಿಂದ ಗುರುವಾರ ಬೆಳಿಗ್ಗೆ 11 ಗಂಟೆಯ ವರೆಗೆ ಮೆರವಣಿಗೆ ನಡೆಯಿತು. ಡಿ.ಜೆ ನಿಷೇಧ ಮಾಡಿದರೂ ಅನೇಕ ಗಜಾನನ ಮಂಡಳಿಗಳು ಬೃಹತ್ ಗಾತ್ರದ ಸೌಂಡ್ ಸಿಸ್ಟಂನೊಂದಿಗೆ ಭವ್ಯವಾದ ಮೆರವಣಿಗೆ ಮೂಲಕ ಗಣನಾಯಕನಿಗೆ ವಿದಾಯ ಹೇಳಿದವು.</p>.<p>ಯುವಕರು ಡಿ.ಜೆ ಹಾಡಿಗೆ ಕುಣಿದು ಕುಪ್ಪಳಿಸಿದರು. ಪರಸ್ಪರ ಬನ್ಣ ಎರಚಿಕೊಂಡು ಗಣಪತಿ ಬಪ್ಪ ಮೋರಯಾ ಘೊಷಣೆ ಹಾಕಿ ಮೆರವಣಿಗೆಯಲ್ಲಿ ಸಾಗಿದರು.</p>.<p>ನಗರದ ವ್ಯಾಪ್ತಿಯ ಗಣೇಶಗಳನ್ನು ಖಾಸಭಾವಿಯಲ್ಲಿ ವಿಸರ್ಜನೆ ಮಾಡಲಾಯಿತು. ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ನಗರದ 389 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1015 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯಿತು.</p>.<p>ಬಿಗಿ ಬಂದೋಬಸ್ತ್: ಗಣೇಶ ವಿಸರ್ಜನೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ 4 ಕೆಎಆರ್ ಪಿ ತುಕಡಿ, 9ಡಿಆರ್ ಪಿ, , ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 3 ಡಿಎಸ್ ಪಿ, 16 ಇನ್ಸ್ ಪೆಕ್ಟರ್, 60 ಸಬ್ ಇನ್ಸ್ ಪೆಕ್ಟರ್, 1050 ಎಎಸ್ ಐ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು 500 ಗೃಹ ರಕ್ಷಕದಳದವರನ್ನು ನಿಯೋಜಿಸಲಾಗಿತ್ತು.</p>.<p>ಗಾಜಗಾರಪೇಟೆಯಿಂದ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ಮಾವಿನಕೆರೆಗೆ ಬರುತ್ತಿದ್ದಂತೆ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಪೊಲೀಸರು ಲಾಠಿ ಬೀಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>