<p><strong>ಬೀದರ್:</strong> ‘ಜಿಲ್ಲೆಯಲ್ಲಿರುವ 29 ಕೆರೆಗಳ ಪುನಶ್ಚೇತನಕ್ಕೆ ₹77 ಕೋಟಿ, 33 ಉದ್ಯಾನವನಗಳ ಅಭಿವೃದ್ಧಿಗೆ ₹23 ಕೋಟಿಯನ್ನು ಅಮೃತ್ -2 ಅಡಿಯಲ್ಲಿ ಮಂಜೂರು ಮಾಡಲಾಗಿದೆ. ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ತ್ವರಿತವಾಗಿ ಕಾಮಗಾರಿ ಆರಂಭಿಸಬೇಕು’ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.</p>.<p>ಬೆಂಗಳೂರಿನ ವಿಕಾಸಸೌಧದ 422ನೇ ಕೊಠಡಿಯಲ್ಲಿ ಗುರುವಾರ ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ಬೀದರ್ ಜಿಲ್ಲೆಯ ಕೆರೆಗಳ ಪುನಶ್ಚೇತನ ಮತ್ತು ಉದ್ಯಾನಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.</p>.<p>ಈ ಬಾರಿಯ ವನಮಹೋತ್ಸವದ ವೇಳೆ ಬೀದರ್ ಹವಾಮಾನಕ್ಕೆ ಹೊಂದಿಕೊಳ್ಳುವಂತಹ ಸ್ಥಳೀಯ ಪ್ರಭೇದದ ಗಿಡಗಳನ್ನು ನೆಟ್ಟು ಬೆಳೆಸಬೇಕು. ಎತ್ತರದ ಸಸಿಗಳನ್ನು ನೆಟ್ಟರೆ ಅವು ಹೆಚ್ಚಿನ ಪ್ರಮಾಣದಲ್ಲಿ ಬದುಕಿ ಉಳಿಯುತ್ತವೆ. ಈ ಬಾರಿ ಎತ್ತರದ ಸಸಿಗಳನ್ನು ನೆಡಬೇಕು ಎಂದರು.</p>.<p>ಉದ್ಯಾನದಲ್ಲಿ ಪುತ್ಥಳಿಗೆ ಅವಕಾಶವಿಲ್ಲ: ಉದ್ಯಾನಗಳ ಪ್ರದೇಶದಲ್ಲಿ ಅನಧಿಕೃತವಾಗಿ ಯಾವುದೇ ಪುತ್ಥಳಿ ಸ್ಥಾಪಿಸಲು ಅಥವಾ ದೇವಾಲಯ ನಿರ್ಮಾಣ ಮಾಡಲು ಅವಕಾಶ ನೀಡಬಾರದು. ಉದ್ಯಾನಗಳು ಉತ್ತಮ ಶ್ವಾಸ ತಾಣಗಳಾಗಿರಬೇಕು. ಇಲ್ಲಿ ಸ್ಥಳೀಯ ಪ್ರಬೇಧದ ಗಿಡಗಳನ್ನು ಬೆಳೆಸಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿರುವ 33 ಉದ್ಯಾನಗಳಲ್ಲಿ ಯಾವುದೂ ಒತ್ತುವರಿ ಆಗದಂತೆ ತಡೆಯಲು ಹಾಗೂ ಅವುಗಳಲ್ಲಿ ಹೂವಿನ ಗಿಡಗಳನ್ನು ದನಕರುಗಳು ತಿನ್ನದಂತೆ ಕಾಪಾಡಲು ಗಟ್ಟಿಮುಟ್ಟಾದ ತಂತಿಬೇಲಿ ಹಾಕಬೇಕು ಸಚಿವ ಖಂಡ್ರೆ ತಿಳಿಸಿದರು.</p>.<p>ಉದ್ಯಾನಗಳನ್ನು ವಿಶ್ವದರ್ಜೆಯ ಮಾನದಂಡಗಳಿಗೆ ಅನುಗುಣವಾಗಿ ಅಭಿವೃದ್ಧಿಪಡಿಸಬೇಕು, ಮಕ್ಕಳ ಆಟಿಕೆಗಳನ್ನು ಅಳವಡಿಸಿ ನಿರ್ವಹಣೆ ಮಾಡಬೇಕು. ಮರಗಳ ಮೇಲೆ ಅವುಗಳ ಪ್ರಭೇದ, ವೈಶಿಷ್ಟ್ಯದ ಫಲಕ ಹಾಕಿ ಮಕ್ಕಳಿಗೆ ಪ್ರಕೃತಿ, ಪರಿಸರದ ಅರಿವು ಮೂಡಿಸಬೇಕು ಎಂದು ತಿಳಿಸಿದರು.</p>.<p>ಕೆರೆಗಳ ಹೂಳು ತೆಗೆಯಲು ಸೂಚನೆ: ಕೆರೆಗಳ ಸ್ವಚ್ಛತೆ ಅತಿ ಮುಖ್ಯವಾಗಿದೆ. ಕೆರೆಗಳಿಗೆ ತ್ಯಾಜ್ಯದ ನೀರು ಸೇರಿದರೆ ಜನ, ಜಾನುವಾರಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳು ಸಾವಿಗೀಡಾಗುತ್ತವೆ. ಹೀಗಾಗಿ ಜಿಲ್ಲೆಯ ಎಲ್ಲ 29 ಕೆರೆಗಳ ಹೂಳು ತೆಗೆಯಬೇಕು, ತ್ಯಾಜ್ಯ ಹರಿಯಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.</p>.<p><strong>ಎಸ್.ಟಿ.ಪಿ. ಸ್ಥಾಪನೆ:</strong> ನಗರ, ಪಟ್ಟಣಕ್ಕೆ ಹೊಂದಿಕೊಂಡಿರುವ ಕೆರೆಗಳ ಬಳಿ ತ್ಯಾಜ್ಯ ಜಲ ಸಂಸ್ಕರಣಾ ಘಟಕ (ಎಸ್.ಟಿ.ಪಿ.) ಸ್ಥಾಪಿಸಿ, ಜಲ ಶುದ್ಧೀಕರಣವಾದ ಬಳಿಕ ಕೆರೆಗೆ ಹರಿಸಬೇಕು. ಯೋಜನಾ ವರದಿ ಸಿದ್ಧಪಡಿಸಿ ಎಂದು ಈಶ್ವರ ಖಂಡ್ರೆ ಸೂಚನೆ ನೀಡಿದರು.</p>.<p>ಈಗಾಗಲೇ ಸ್ಥಾಪಿಸಲಾಗಿರುವ ಎಸ್.ಟಿ.ಪಿ.ಗಳು ಕಾರ್ಯನಿರ್ವಹಿಸುತ್ತಿವೆಯೇ ಇಲ್ಲವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಿದ ಅವರು, ಜಲ ಮೂಲಗಳ ನಿಯಮಿತ ಪರಿಶೀಲನೆ ನಡೆಸುವಂತೆಯೂ ತಿಳಿಸಿದರು.</p>.<p>ಭಾಲ್ಕಿಯ ಮಾಸೂಂಪಾಶಾ ಕಾಲೊನಿಯಲ್ಲಿರುವ 8 ಎಕರೆ ಕೆರೆ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಹಾಗೂ ಏರಿ ನಿರ್ಮಾಣ ಮಾಡಲು ಸೂಚನೆ ನೀಡಿದರು. </p>.<p>ಪೌರಾಡಳಿತ ಸಚಿವ ರಹೀಂ ಖಾನ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ್ ಕವಳಿಕಟ್ಟಿ ಮತ್ತು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಜಿಲ್ಲೆಯಲ್ಲಿರುವ 29 ಕೆರೆಗಳ ಪುನಶ್ಚೇತನಕ್ಕೆ ₹77 ಕೋಟಿ, 33 ಉದ್ಯಾನವನಗಳ ಅಭಿವೃದ್ಧಿಗೆ ₹23 ಕೋಟಿಯನ್ನು ಅಮೃತ್ -2 ಅಡಿಯಲ್ಲಿ ಮಂಜೂರು ಮಾಡಲಾಗಿದೆ. ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ತ್ವರಿತವಾಗಿ ಕಾಮಗಾರಿ ಆರಂಭಿಸಬೇಕು’ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.</p>.<p>ಬೆಂಗಳೂರಿನ ವಿಕಾಸಸೌಧದ 422ನೇ ಕೊಠಡಿಯಲ್ಲಿ ಗುರುವಾರ ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ಬೀದರ್ ಜಿಲ್ಲೆಯ ಕೆರೆಗಳ ಪುನಶ್ಚೇತನ ಮತ್ತು ಉದ್ಯಾನಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.</p>.<p>ಈ ಬಾರಿಯ ವನಮಹೋತ್ಸವದ ವೇಳೆ ಬೀದರ್ ಹವಾಮಾನಕ್ಕೆ ಹೊಂದಿಕೊಳ್ಳುವಂತಹ ಸ್ಥಳೀಯ ಪ್ರಭೇದದ ಗಿಡಗಳನ್ನು ನೆಟ್ಟು ಬೆಳೆಸಬೇಕು. ಎತ್ತರದ ಸಸಿಗಳನ್ನು ನೆಟ್ಟರೆ ಅವು ಹೆಚ್ಚಿನ ಪ್ರಮಾಣದಲ್ಲಿ ಬದುಕಿ ಉಳಿಯುತ್ತವೆ. ಈ ಬಾರಿ ಎತ್ತರದ ಸಸಿಗಳನ್ನು ನೆಡಬೇಕು ಎಂದರು.</p>.<p>ಉದ್ಯಾನದಲ್ಲಿ ಪುತ್ಥಳಿಗೆ ಅವಕಾಶವಿಲ್ಲ: ಉದ್ಯಾನಗಳ ಪ್ರದೇಶದಲ್ಲಿ ಅನಧಿಕೃತವಾಗಿ ಯಾವುದೇ ಪುತ್ಥಳಿ ಸ್ಥಾಪಿಸಲು ಅಥವಾ ದೇವಾಲಯ ನಿರ್ಮಾಣ ಮಾಡಲು ಅವಕಾಶ ನೀಡಬಾರದು. ಉದ್ಯಾನಗಳು ಉತ್ತಮ ಶ್ವಾಸ ತಾಣಗಳಾಗಿರಬೇಕು. ಇಲ್ಲಿ ಸ್ಥಳೀಯ ಪ್ರಬೇಧದ ಗಿಡಗಳನ್ನು ಬೆಳೆಸಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿರುವ 33 ಉದ್ಯಾನಗಳಲ್ಲಿ ಯಾವುದೂ ಒತ್ತುವರಿ ಆಗದಂತೆ ತಡೆಯಲು ಹಾಗೂ ಅವುಗಳಲ್ಲಿ ಹೂವಿನ ಗಿಡಗಳನ್ನು ದನಕರುಗಳು ತಿನ್ನದಂತೆ ಕಾಪಾಡಲು ಗಟ್ಟಿಮುಟ್ಟಾದ ತಂತಿಬೇಲಿ ಹಾಕಬೇಕು ಸಚಿವ ಖಂಡ್ರೆ ತಿಳಿಸಿದರು.</p>.<p>ಉದ್ಯಾನಗಳನ್ನು ವಿಶ್ವದರ್ಜೆಯ ಮಾನದಂಡಗಳಿಗೆ ಅನುಗುಣವಾಗಿ ಅಭಿವೃದ್ಧಿಪಡಿಸಬೇಕು, ಮಕ್ಕಳ ಆಟಿಕೆಗಳನ್ನು ಅಳವಡಿಸಿ ನಿರ್ವಹಣೆ ಮಾಡಬೇಕು. ಮರಗಳ ಮೇಲೆ ಅವುಗಳ ಪ್ರಭೇದ, ವೈಶಿಷ್ಟ್ಯದ ಫಲಕ ಹಾಕಿ ಮಕ್ಕಳಿಗೆ ಪ್ರಕೃತಿ, ಪರಿಸರದ ಅರಿವು ಮೂಡಿಸಬೇಕು ಎಂದು ತಿಳಿಸಿದರು.</p>.<p>ಕೆರೆಗಳ ಹೂಳು ತೆಗೆಯಲು ಸೂಚನೆ: ಕೆರೆಗಳ ಸ್ವಚ್ಛತೆ ಅತಿ ಮುಖ್ಯವಾಗಿದೆ. ಕೆರೆಗಳಿಗೆ ತ್ಯಾಜ್ಯದ ನೀರು ಸೇರಿದರೆ ಜನ, ಜಾನುವಾರಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳು ಸಾವಿಗೀಡಾಗುತ್ತವೆ. ಹೀಗಾಗಿ ಜಿಲ್ಲೆಯ ಎಲ್ಲ 29 ಕೆರೆಗಳ ಹೂಳು ತೆಗೆಯಬೇಕು, ತ್ಯಾಜ್ಯ ಹರಿಯಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.</p>.<p><strong>ಎಸ್.ಟಿ.ಪಿ. ಸ್ಥಾಪನೆ:</strong> ನಗರ, ಪಟ್ಟಣಕ್ಕೆ ಹೊಂದಿಕೊಂಡಿರುವ ಕೆರೆಗಳ ಬಳಿ ತ್ಯಾಜ್ಯ ಜಲ ಸಂಸ್ಕರಣಾ ಘಟಕ (ಎಸ್.ಟಿ.ಪಿ.) ಸ್ಥಾಪಿಸಿ, ಜಲ ಶುದ್ಧೀಕರಣವಾದ ಬಳಿಕ ಕೆರೆಗೆ ಹರಿಸಬೇಕು. ಯೋಜನಾ ವರದಿ ಸಿದ್ಧಪಡಿಸಿ ಎಂದು ಈಶ್ವರ ಖಂಡ್ರೆ ಸೂಚನೆ ನೀಡಿದರು.</p>.<p>ಈಗಾಗಲೇ ಸ್ಥಾಪಿಸಲಾಗಿರುವ ಎಸ್.ಟಿ.ಪಿ.ಗಳು ಕಾರ್ಯನಿರ್ವಹಿಸುತ್ತಿವೆಯೇ ಇಲ್ಲವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಿದ ಅವರು, ಜಲ ಮೂಲಗಳ ನಿಯಮಿತ ಪರಿಶೀಲನೆ ನಡೆಸುವಂತೆಯೂ ತಿಳಿಸಿದರು.</p>.<p>ಭಾಲ್ಕಿಯ ಮಾಸೂಂಪಾಶಾ ಕಾಲೊನಿಯಲ್ಲಿರುವ 8 ಎಕರೆ ಕೆರೆ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಹಾಗೂ ಏರಿ ನಿರ್ಮಾಣ ಮಾಡಲು ಸೂಚನೆ ನೀಡಿದರು. </p>.<p>ಪೌರಾಡಳಿತ ಸಚಿವ ರಹೀಂ ಖಾನ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ್ ಕವಳಿಕಟ್ಟಿ ಮತ್ತು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>