<p><strong>ರಾಯಚೂರು:</strong> ಜಿಲ್ಲೆಯಲ್ಲಿ 31 ಎಂಎಸ್ಐಎಲ್ ಮಳಿಗೆ ಸೇರಿದಂತೆ ಒಟ್ಟು 123 ಮದ್ಯದಂಗಡಿಗಳನ್ನು ತೆರೆಯುವುದಕ್ಕೆ ಪರವಾನಿಗೆ ನೀಡಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ಮದ್ಯಪ್ರಿಯರು ಸರದಿಯಲ್ಲಿ ನಿಂತಿದ್ದರು.</p>.<p>ಅದರಲ್ಲೂ ಎಂಎಸ್ಐಎಲ್ ಮಳಿಗೆಗಳ ಎದುರು ಸರದಿ ಸಾಲು ಉದ್ದವಾಗಿತ್ತು. ಅಂತರ ಕಾಯ್ದುಕೊಳ್ಳಲು ಹಾಕಿದ್ದ ಬ್ಯಾರಿಕೇಡ್ ಹಾಗೂ ಚಿಹ್ನೆಗಿಂತಲೂ ಹೆಚ್ಚು ಜನರು ನೆರೆದಿದ್ದರು. ಆರಂಭದಲ್ಲಿ ಮಾತ್ರ ಅಂತರ ಕಾಯ್ದುಕೊಂಡಿರುವುದು ಕಂಡುಬಂತು, ಮಧ್ಯಾಹ್ನದ ನಂತರ ಗುಂಪಾಗಿ ನಿಂತು ಮದ್ಯ ಖರೀದಿಸುತ್ತಿರುವುದು ಕಂಡುಬಂತು.</p>.<p>ಲಿಂಗಸುಗೂರು, ಮಾನ್ವಿ, ದೇವದುರ್ಗ ಹಾಗೂ ಸಿಂಧನೂರು ತಾಲ್ಲೂಕು ಕೇಂದ್ರಗಳಲ್ಲಿರುವ ಸಿಎಲ್–2 ಮದ್ಯದಂಗಡಿಗಳ ಎದುರು ಸರದಿ ಏರ್ಪಟ್ಟಿತ್ತು. ಸಂಜೆ 7 ಗಂಟೆವರೆಗೂ ಮದ್ಯದಂಗಡಿ ತೆರೆಯಲು ಅವಕಾಶ ನೀಡಲಾಗಿದೆ.</p>.<p>ತಲುಪಿದ ಕಾರ್ಮಿಕರು: ಬೆಂಗಳೂರಿನಿಂದ 37 ಸರ್ಕಾರಿ ಬಸ್ಗಳಲ್ಲಿ ರಾಯಚೂರು ಜಿಲ್ಲೆಯ ಕಾರ್ಮಿಕರನ್ನು ಭಾನುವಾರ ತಡರಾತ್ರಿ ಕರೆತರಲಾಗಿದ್ದು, ಕೇಂದ್ರ ಬಸ್ ನಿಲ್ದಾಣದಲ್ಲಿ ಎಲ್ಲ ಆರೋಗ್ಯ ತಪಾಸಣೆ ನಡೆಸಲಾಯಿತು. ಆನಂತರ ಎಲ್ಲರನ್ನು ಸ್ವಗ್ರಾಮಗಳಿಗೆ ತಲುಪಿಸಲಾಯಿತು ಎಂದು ಜಿಲ್ಲಾಡಳಿತ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲೆಯಲ್ಲಿ 31 ಎಂಎಸ್ಐಎಲ್ ಮಳಿಗೆ ಸೇರಿದಂತೆ ಒಟ್ಟು 123 ಮದ್ಯದಂಗಡಿಗಳನ್ನು ತೆರೆಯುವುದಕ್ಕೆ ಪರವಾನಿಗೆ ನೀಡಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ಮದ್ಯಪ್ರಿಯರು ಸರದಿಯಲ್ಲಿ ನಿಂತಿದ್ದರು.</p>.<p>ಅದರಲ್ಲೂ ಎಂಎಸ್ಐಎಲ್ ಮಳಿಗೆಗಳ ಎದುರು ಸರದಿ ಸಾಲು ಉದ್ದವಾಗಿತ್ತು. ಅಂತರ ಕಾಯ್ದುಕೊಳ್ಳಲು ಹಾಕಿದ್ದ ಬ್ಯಾರಿಕೇಡ್ ಹಾಗೂ ಚಿಹ್ನೆಗಿಂತಲೂ ಹೆಚ್ಚು ಜನರು ನೆರೆದಿದ್ದರು. ಆರಂಭದಲ್ಲಿ ಮಾತ್ರ ಅಂತರ ಕಾಯ್ದುಕೊಂಡಿರುವುದು ಕಂಡುಬಂತು, ಮಧ್ಯಾಹ್ನದ ನಂತರ ಗುಂಪಾಗಿ ನಿಂತು ಮದ್ಯ ಖರೀದಿಸುತ್ತಿರುವುದು ಕಂಡುಬಂತು.</p>.<p>ಲಿಂಗಸುಗೂರು, ಮಾನ್ವಿ, ದೇವದುರ್ಗ ಹಾಗೂ ಸಿಂಧನೂರು ತಾಲ್ಲೂಕು ಕೇಂದ್ರಗಳಲ್ಲಿರುವ ಸಿಎಲ್–2 ಮದ್ಯದಂಗಡಿಗಳ ಎದುರು ಸರದಿ ಏರ್ಪಟ್ಟಿತ್ತು. ಸಂಜೆ 7 ಗಂಟೆವರೆಗೂ ಮದ್ಯದಂಗಡಿ ತೆರೆಯಲು ಅವಕಾಶ ನೀಡಲಾಗಿದೆ.</p>.<p>ತಲುಪಿದ ಕಾರ್ಮಿಕರು: ಬೆಂಗಳೂರಿನಿಂದ 37 ಸರ್ಕಾರಿ ಬಸ್ಗಳಲ್ಲಿ ರಾಯಚೂರು ಜಿಲ್ಲೆಯ ಕಾರ್ಮಿಕರನ್ನು ಭಾನುವಾರ ತಡರಾತ್ರಿ ಕರೆತರಲಾಗಿದ್ದು, ಕೇಂದ್ರ ಬಸ್ ನಿಲ್ದಾಣದಲ್ಲಿ ಎಲ್ಲ ಆರೋಗ್ಯ ತಪಾಸಣೆ ನಡೆಸಲಾಯಿತು. ಆನಂತರ ಎಲ್ಲರನ್ನು ಸ್ವಗ್ರಾಮಗಳಿಗೆ ತಲುಪಿಸಲಾಯಿತು ಎಂದು ಜಿಲ್ಲಾಡಳಿತ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>