ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸಗಿ: ಕೃಷ್ಣಾ ನದಿಗೆ 1.36 ಲಕ್ಷ ಕ್ಯುಸೆಕ್‌ ನೀರು

ಕೃಷ್ಣಾ ಜಲನಯನ ಪ್ರದೇಶದಲ್ಲಿ ಮಳೆ, ಮತ್ತಷ್ಟು ಹೊರ ಹರಿವು ಹೆಚ್ಚಳ ಸಾಧ್ಯತೆ
Last Updated 15 ಸೆಪ್ಟೆಂಬರ್ 2021, 5:19 IST
ಅಕ್ಷರ ಗಾತ್ರ

ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 22 ಕ್ರಸ್ಟ್‌ ಗೇಟುಗಳ ಮೂಲಕ ಮಂಗಳವಾರ ರಾತ್ರಿಯಿಂದ 1.36 ಲಕ್ಷ ಕ್ಯುಸೆಕ್‌ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

90,000 ಸಾವಿರ ಕ್ಯುಸೆಕ್‌ ಜಲಾಶಯಕ್ಕೆ ಒಳಹರಿವಿದ್ದರೆ 1,36,700 ಕ್ಯುಸೆಕ್‌ ಕೃಷ್ಣಾ ನದಿಗೆ, 6,000 ಕ್ಯುಸೆಕ್‌ ಜಲವಿದ್ಯುತ್‌ಗೆ, 4,500 ಕ್ಯುಸೆಕ್ ನೀರು ಕಾಲುವೆಗೆ ಹರಿಸಲಾಗುತ್ತಿದೆ.

ಕಳೆದ ಒಂದು ವಾರದಿಂದ ಕೃಷ್ಣಾ ಜಲನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಇದರಿಂದ ಜಲಾಶಯಕ್ಕೆ ನೀರಿನ ಪ್ರಮಾಣ ಹೆಚ್ಚುತ್ತಿದೆ. ಪ್ರತಿ ಗಂಟೆಗೊಮ್ಮೆ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದೆ.

ಗರಿಷ್ಠ ಮಟ್ಟ 492.25 ಮೀಟರ್‌ ಇದ್ದು, 491.72 ಮೀಟರ್‌ ಕಾಯ್ದುಕೊಂಡು ಹೆಚ್ಚಿನ ನೀರನ್ನು ನದಿಗೆ ಹರಿಸಲಾಗುತ್ತಿದೆ. ಅಲ್ಲದೇ 1.80 ಲಕ್ಷ ಕ್ಯುಸೆಕ್‌ ನೀರು ತಲುಪುವ ಸಾಧ್ಯತೆ ಇದೆ ಜಲಾಶಯದ ಮೂಲಗಳು ತಿಳಿಸಿವೆ.

ಜನ–ಜಾನುವಾರುನದಿಗೆ ಇಳಿದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT