ರಾಯಚೂರು:‘ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರಾಟಗಾರರ ಸಂಘದ ಅಧ್ಯಕ್ಷ ಎನ್.ಮಹಾವೀರ ಅವರು ತರಕಾರಿ ಮಾರುಕಟ್ಟೆಯಲ್ಲಿನ ಮಳಿಗೆಗಳ ಬಾಡಿಗೆ, ಕಟ್ಟೆ, ನೆಲದ ಮೇಲೆ ಕುಳಿತುಕೊಂಡು ತರಕಾರಿ ಮಾರಾಟಗಾರರಿಂದ ಸಂಗ್ರಹಿಸಿದ ಶುಲ್ಕ ಸೇರಿ ಒಟ್ಟು ₹14 ಲಕ್ಷ ಬಾಕಿ ಉಳಿಸಿಕೊಂಡಿದ್ದಾರೆ . ಇವತ್ತಿಗೂ ನಗರಸಭೆಗೆ ಬಾಕಿ ಪಾವತಿಸಿಲ್ಲ’ ಎಂದು ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್ ಆರೋಪಿಸಿದರು.