ರಾಯಚೂರು: ತಾಲ್ಲೂಕಿನ ಶಕ್ತಿನಗರದ ಶ್ರೀ ಚನ್ನಪ್ಪ ಪದವಿ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ 14 ವಿದ್ಯಾರ್ಥಿಗಳನ್ನು ಪರೀಕ್ಷಾ ಜಾಗೃತದಳದವರು ಬುಧವಾರ ಡಿಬಾರ್ ಮಾಡಿದ್ದಾರೆ.
ಬಿ.ಎ. 4ನೇ ಸೆಮಿಸ್ಟರ್ನ ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಪತ್ತೆಯಾಗಿದೆ. ಪದವಿ ಪರೀಕ್ಷೆಗಳು ಆರಂಭವಾದ ಬಳಿಕ ಒಟ್ಟು ಇವರೆಗೂ ಸುಮಾರು 75 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
‘ಪರೀಕ್ಷೆಯಲ್ಲಿ ನಕಲು ಮಾಡುವ ಪ್ರವೃತ್ತಿ ಕಂಡು ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಪಾಲಕರು ಈ ಬಗ್ಗೆ ಎಚ್ಚರಿಕೆ ವಹಿಸುವುದು ತುಂಬಾ ಅಗತ್ಯವಿದೆ’ ಎಂದು ಜಾಗೃತ ದಳದ ಅಧ್ಯಕ್ಷ ಪ್ರಾಣೇಶ ಕುಲಕರ್ಣಿ ತಿಳಿಸಿದರು.