ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಸುದಾರರಿಗೆ 196 ಮೊಬೈಲ್‌ ಮರಳಿಸಿದ ಎಸ್‌ಪಿ

Last Updated 30 ಸೆಪ್ಟೆಂಬರ್ 2022, 16:40 IST
ಅಕ್ಷರ ಗಾತ್ರ

ರಾಯಚೂರು: ಜನಸಂದಣಿ ಏರ್ಪಡುವ ಸಂತೆ, ಜಾತ್ರೆ, ತರಕಾರಿ ಮಾರಕಟ್ಟೆ ಹಾಗೂ ಉತ್ಸವಗಳಲ್ಲಿ ಜಿಲ್ಲೆಯಾದ್ಯಂತ ಜನರು ಕಳೆದುಕೊಂಡಿದ್ದ 196 ಮೊಬೈಲ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಮೊಬೈಲ್‌ಗಳನ್ನು ವಾರಸುದಾರರಿಗೆ ಮರಳಿಸುವ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಅವರು ಶುಕ್ರವಾರ ಚಾಲನೆ ನೀಡಿದರು.

ಸಾಂಕೇತಿಕವಾಗಿ ಕೆಲವರಿಗೆ ಮೊಬೈಲ್‌ಗಳನ್ನು ಮರಳಿಸಿದ್ದು, ಆಯಾ ಪೊಲೀಸ್‌ ಠಾಣೆಗಳ ಮೂಲಕ ಇನ್ನುಳಿದ ಮೊಬೈಲ್‌ಗಳನ್ನು ವಾರಸುದಾರರಿಗೆ ತಲುಪಿಸಲಾಗುತ್ತದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ್‌ ಆರ್‌. ಅವರ ಮಾರ್ಗದರ್ಶನದಲ್ಲಿ ರಾಯಚೂರು, ಸಿಂಧನೂರು ಮತ್ತು ಲಿಂಗಸುಗೂರು ಉಪವಿಭಾಗಗಳ ಪೊಲೀಸರು, ಮೊಬೈಲ್‌ಗಳನ್ನು ಪತ್ತೆ ಮಾಡುವುದಕ್ಕೆ ವೈಜ್ಞಾನಿಕ ವಿಧಾನಗಳನ್ನು ಅನುಸರಿಸರಿಸಿದ್ದರು. ಬಹಳಷ್ಟು ಸಂದರ್ಭಗಳಲ್ಲಿ ಸಾರ್ವಜನಿಕರು ತಮ್ಮ ನಿರ್ಲಕ್ಷ್ಯದಿಂದಲೇ ಮೊಬೈಲ್‌ ಕಳೆದುಕೊಂಡಿರುವುದು ಗೊತ್ತಾಗಿದೆ. ಹೀಗಾಗಿ ಬೆಳೆಬಾಳುವ ಮೊಬೈಲ್‌ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನಿಖಿಲ್‌ ಬಿ. ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT