<p><strong>ಮಸ್ಕಿ:</strong> ಪಟ್ಟಣದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಜನ ಆತಂಕಗೊಂಡಿದ್ದಾರೆ.</p>.<p>ಪಟ್ಟಣದಲ್ಲಿಭಾನುವಾರ 23 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.</p>.<p>ಎರಡು ದಿನಗಳಲ್ಲಿ ಸೋಂಕಿತರ ಸಂಖ್ಯೆ 40 ರ ಗಡಿ ದಾಟಿದೆ. ಕೊರೊನಾ ಸೋಂಕಿನಿಂದ ಪಟ್ಟಣದ ವ್ಯಕ್ತಿಯೊಬ್ಬರು ಬಳ್ಳಾರಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<p>‘ಕೊರೊನಾ ಸೋಂಕಿತರನ್ನು ಹೋಂ ಐಸೋಲೇಷನ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮನೆಗಳಿಗೆ ಪುರಸಭೆ ವತಿಯಿಂದ ಸಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ’ ಎಂದು ಡಾ.ಮೌನೇಶ ತಿಳಿಸಿದ್ದಾರೆ.</p>.<p>‘ಪಟ್ಟಣದಲ್ಲಿ ಸೋಂಕಿತರ ಪತ್ತೆ ಕಾರ್ಯ ನಡೆದಿದೆ. ಪ್ರತಿದಿನ 70 ರಿಂದ 100 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳಿಸಿಕೊಡಲಾಗುತ್ತಿದೆ. ಇನ್ನು ಮುಂದೆ ಪ್ರತಿದಿನ 200 ಜನರನ್ನು ಪರೀಕ್ಷೆಗೊಳಪಡಿಸುವ ಗುರಿ ಹೊಂದಲಾಗಿದೆ’ ಎಂದು ಡಾ. ಮೌನೇಶ ತಿಳಿಸಿದ್ದಾರೆ.</p>.<p>‘ಕೊರೊನಾ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ. ಸಾರ್ವಜನಿಕರು ಮನೆಬಿಟ್ಟು ಹೊರ ಬರಬಾರದು’ ಎಂದು ಸಬ್ ಇನ್ಸ್ಪೆಕ್ಟರ್ ಸಿದ್ದರಾಮಪ್ಪ ಮನವಿ ಮಾಡಿದ್ದಾರೆ.</p>.<p>‘ನಿಯಮ ಉಲ್ಲಂಘಿಸಿ ಹೊರ ಬಂದರೆ ಅಂತವರ ಬೈಕ್ ಜಪ್ತಿ ಮಾಡುವ ಮೂಲಕ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.</p>.<p>ವಾರಾಂತ್ಯ ಕರ್ಫ್ಯೂ ಇದ್ದ ಕಾರಣ ಸಂತೆ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ತೆರೆಯದಂತೆ ಪುರಸಭೆ ಸಿಬ್ಬಂದಿ ನೋಡಿಕೊಂಡರು. ತೆರೆದಿದ್ದ ಕೆಲವೊಂದು ಅಂಗಡಿಗಳನ್ನು ಬಂದ್ ಮಾಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ಪಟ್ಟಣದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಜನ ಆತಂಕಗೊಂಡಿದ್ದಾರೆ.</p>.<p>ಪಟ್ಟಣದಲ್ಲಿಭಾನುವಾರ 23 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.</p>.<p>ಎರಡು ದಿನಗಳಲ್ಲಿ ಸೋಂಕಿತರ ಸಂಖ್ಯೆ 40 ರ ಗಡಿ ದಾಟಿದೆ. ಕೊರೊನಾ ಸೋಂಕಿನಿಂದ ಪಟ್ಟಣದ ವ್ಯಕ್ತಿಯೊಬ್ಬರು ಬಳ್ಳಾರಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<p>‘ಕೊರೊನಾ ಸೋಂಕಿತರನ್ನು ಹೋಂ ಐಸೋಲೇಷನ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮನೆಗಳಿಗೆ ಪುರಸಭೆ ವತಿಯಿಂದ ಸಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ’ ಎಂದು ಡಾ.ಮೌನೇಶ ತಿಳಿಸಿದ್ದಾರೆ.</p>.<p>‘ಪಟ್ಟಣದಲ್ಲಿ ಸೋಂಕಿತರ ಪತ್ತೆ ಕಾರ್ಯ ನಡೆದಿದೆ. ಪ್ರತಿದಿನ 70 ರಿಂದ 100 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳಿಸಿಕೊಡಲಾಗುತ್ತಿದೆ. ಇನ್ನು ಮುಂದೆ ಪ್ರತಿದಿನ 200 ಜನರನ್ನು ಪರೀಕ್ಷೆಗೊಳಪಡಿಸುವ ಗುರಿ ಹೊಂದಲಾಗಿದೆ’ ಎಂದು ಡಾ. ಮೌನೇಶ ತಿಳಿಸಿದ್ದಾರೆ.</p>.<p>‘ಕೊರೊನಾ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ. ಸಾರ್ವಜನಿಕರು ಮನೆಬಿಟ್ಟು ಹೊರ ಬರಬಾರದು’ ಎಂದು ಸಬ್ ಇನ್ಸ್ಪೆಕ್ಟರ್ ಸಿದ್ದರಾಮಪ್ಪ ಮನವಿ ಮಾಡಿದ್ದಾರೆ.</p>.<p>‘ನಿಯಮ ಉಲ್ಲಂಘಿಸಿ ಹೊರ ಬಂದರೆ ಅಂತವರ ಬೈಕ್ ಜಪ್ತಿ ಮಾಡುವ ಮೂಲಕ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.</p>.<p>ವಾರಾಂತ್ಯ ಕರ್ಫ್ಯೂ ಇದ್ದ ಕಾರಣ ಸಂತೆ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ತೆರೆಯದಂತೆ ಪುರಸಭೆ ಸಿಬ್ಬಂದಿ ನೋಡಿಕೊಂಡರು. ತೆರೆದಿದ್ದ ಕೆಲವೊಂದು ಅಂಗಡಿಗಳನ್ನು ಬಂದ್ ಮಾಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>