ಸರ್ಕಾರ ಒಂದು ಕಡೆ ಹೆಚ್ಚು ಹೆಚ್ಚು ವಿದ್ಯಾರ್ಥಿಗಳ ವಸತಿ ಶಾಲೆ, ವಸತಿ ನಿಲಯ ಆರಂಭಿಸುತ್ತಿದೆ. ಆದರೆ, ಇರುವ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ಹಾಗೂ ಮೂಲ ಸೌಕರ್ಯಗಳನ್ನು ಕೊಡುವಲ್ಲಿ ವಿಫಲವಾಗಿದೆ ಎಂದು ದಲಿತ ಮುಖಂಡ ಹನುಮಂತಪ್ಪ ವೆಂಕಟಾಪೂರ, ಮಲ್ಲಯ್ಯ ಬಳ್ಳಾ ಆರೋಪಿಸಿದ್ದಾರೆ. ಸರ್ಕಾರ ಕೂಡಲೇ ಅಂಬೇಡ್ಕರ್ ಹಾಸ್ಟೆಲ್ಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.