<p><strong>ರಾಯಚೂರು:</strong> ಜಿಲ್ಲೆಯಲ್ಲಿ ಬುಧವಾರ ಮತ್ತೆ 216 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಇದೂವರೆಗೆ 8,792 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.</p>.<p>176 ಸೇರಿದಂತೆ ಇದೂವರೆಗೆ ಒಟ್ಟು 6,914 ಜನರು ಕೋವಿಡ್ ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ಜಿಲ್ಲೆಯ ದೇವದುರ್ಗ ತಾಲ್ಲೂಕಿನಿಂದ 31, ಲಿಂಗಸೂಗೂರು 45, ಮಾನ್ವಿ 36, ಸಿಂಧನೂರು 52, ಮತ್ತು ರಾಯಚೂರು ತಾಲ್ಲೂಕಿನಿಂದ 49 ಸೇರಿದಂತೆ ಒಟ್ಟು 213 ಜನರ ಮಾದರಿಯನ್ನು ಕೋವಿಡ್ ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಬುಧವಾರ ಕಳುಹಿಸಲಾಗಿದೆ.</p>.<p>ಈ ಹಿಂದೆ ಕಳುಹಿಸಲಾಗಿದ್ದ ಬರದಿಯಲ್ಲಿ 1,732 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ 89,994 ಜನರ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು,ಈಪೈಕಿ 80,533 ವರದಿಗಳು ನೆಗೆಟಿವ್ ಆಗಿವೆ. ಉಳಿದ 456 ಸ್ಯಾಂಪಲ್ಗಳ ಫಲಿತಾಂಶ ಇನ್ನೂ ಬರಬೇಕಿದೆ.</p>.<p>ಜಿಲ್ಲೆಯಲ್ಲಿ ಒಟ್ಟು 350 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲೆಯಲ್ಲಿ ಬುಧವಾರ ಮತ್ತೆ 216 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಇದೂವರೆಗೆ 8,792 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.</p>.<p>176 ಸೇರಿದಂತೆ ಇದೂವರೆಗೆ ಒಟ್ಟು 6,914 ಜನರು ಕೋವಿಡ್ ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ಜಿಲ್ಲೆಯ ದೇವದುರ್ಗ ತಾಲ್ಲೂಕಿನಿಂದ 31, ಲಿಂಗಸೂಗೂರು 45, ಮಾನ್ವಿ 36, ಸಿಂಧನೂರು 52, ಮತ್ತು ರಾಯಚೂರು ತಾಲ್ಲೂಕಿನಿಂದ 49 ಸೇರಿದಂತೆ ಒಟ್ಟು 213 ಜನರ ಮಾದರಿಯನ್ನು ಕೋವಿಡ್ ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಬುಧವಾರ ಕಳುಹಿಸಲಾಗಿದೆ.</p>.<p>ಈ ಹಿಂದೆ ಕಳುಹಿಸಲಾಗಿದ್ದ ಬರದಿಯಲ್ಲಿ 1,732 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ 89,994 ಜನರ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು,ಈಪೈಕಿ 80,533 ವರದಿಗಳು ನೆಗೆಟಿವ್ ಆಗಿವೆ. ಉಳಿದ 456 ಸ್ಯಾಂಪಲ್ಗಳ ಫಲಿತಾಂಶ ಇನ್ನೂ ಬರಬೇಕಿದೆ.</p>.<p>ಜಿಲ್ಲೆಯಲ್ಲಿ ಒಟ್ಟು 350 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>