<p><strong>ಹಟ್ಟಿ ಚಿನ್ನದ ಗಣಿ:</strong> ‘ಇಲ್ಲಿನ ಚಿನ್ನದಗಣಿ ಕಂಪನಿಯ ಕಾರ್ಮಿಕರಿಗೆ ಹೊಸ ವೇತನ ಒಪ್ಪಂದದ ಪ್ರಕಾರ ಶೇ 27ರಷ್ಟು ಹೆಚ್ಚಳವಾಗಲಿದ್ದು, ಶೀಘ್ರದಲ್ಲಿ ಜಾರಿಗೆ ಬರಲಿದೆ’ ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಹೇಳಿದರು.</p>.<p>ಹಟ್ಟಿ ಪಟ್ಟಣಸ ಕೋಠಾ ಕ್ರಾಸ್ ಬಳಿ ಇರುವ ಪೈ ಭವನದಲ್ಲಿ ಹಮ್ಮಿಕೊಂಡಿದ್ದ ಭಾನುವಾರ ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕ್ರೀಡಾಕೂಟದ ಸಮಾರೋಪ ಹಾಗೂ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಈಗಾಗಲೇ ಹೊಸ ವೇತನ ಒಪ್ಪಂದಗಳಿಗೆ ಗಣಿ ಆಡಳಿತ ಕಂಪನಿ ವೇತನ ಹೆಚ್ಚಳ ಮಾಡಲು ಭರವಸೆ ನೀಡಿದೆ. ಹೊಸ ವೇತನ ಒಪ್ಪಂದಂತೆ ಆದಷ್ಟು ಬೇಗ ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳು ಸಿಗಲಿವೆ ಎಂದು ತಿಳಿಸಿದರು.</p>.<p>ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಎಂ ಶಫೀ ಮಾತನಾಡಿ, ಕಾರ್ಮಿಕರ ಬಹುದಿನದ ಬೇಡಿಕೆಯಾದ ಅನ್ ಫೀಟ್ ಯೋಜನೆ ಜಾರಿಯಾಗಿದ್ದು, ಕಾರ್ಮಿಕ ಮಕ್ಕಳಿಗೆ ಉದ್ಯೋಗ ದೊರೆಯಲಿದೆ. ಈ ಹಿಂದೆ ಇದ್ದ ಸಂಘಟನೆ ಅನ್ ಪೀಟ್ ಯೋಜನೆ ಜಾರಿ ಮಾಡುವಲ್ಲಿ ವಿಫಲವಾಗಿತ್ತು. ಚುನಾವಣೆಯಲ್ಲಿ ನೀಡದ ಭರವಸೆಯಂತೆ ಕಾರ್ಮಿಕ ಮಕ್ಕಳಿಗೆ ಉದ್ಯೋಗ ಸಿಗಲಿದೆ. ಇದು ಎಐಟಿಯುಸಿ ಸಂಘಟನೆ ಹೋರಾಟದ ಪ್ರತಿಫಲವಾಗಿದೆ ಎಂದರು.</p>.<p>ಡಿ.ಎಚ್. ಕಂಬಳಿ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಮಿಕ ವಿರೋದಿ ನೀತಿಗಳನ್ನು ಜಾರಿಗೆ ತರುವ ಹುನ್ನಾರ ನಡೆಸುತ್ತಿತ್ತು. ದುಡಿಯುವ ವರ್ಗದ ಹೋರಾಟ ಜೋರಾದಾಗ ತಟಸ್ಧವಾಗಿವೆ. ದೇಶವನ್ನು ಖಾಸಗಿ ಕಂಪನಿಗೆ ನೀಡಿ ದಿವಾಳಿ ಮಾಡಲು ಹೊರಟಿದೆ ಎಂದು ಆರೋಪ ಮಾಡಿದರು.</p>.<p>ಈ ವೇಳೆ ಎಐಟಿಯುಸಿ ರಾಜ್ಯ ಸಮಿತಿಯ ಪದಾಧಿಕಾರಿಗಳಾದ ಆದಿಮೂರ್ತಿ, ಜಿಲ್ಲಾಧ್ಯಕ್ಷ ಭಾಷುಮಿಯಾ, ಶ್ರೀಶೈಲ ರೆಡ್ಡಿ, ಚಂದ್ರಶೇಖರ್ ಕ್ಯಾತನಟ್ಟಿ, ಲಲಿತಮ್ಮ ಹನುಮಂತ ರೆಡ್ಡಿ, ಶಿವಕುಮಾರ, ಎಐಟಿಯುಸಿ ಸಂಘದ ಅಧ್ಯಕ್ಷ ಶಾಂತಪ್ಪ ಆನ್ವರಿ, ಚಂದ್ರಶೇಖರ, ಯಂಕೋಬ ಮಿಯ್ಯಾಪೂರ, ಮೈನುದ್ದಿನ್, ಪದಾಧಿಕಾರಿಗಳು ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ‘ಇಲ್ಲಿನ ಚಿನ್ನದಗಣಿ ಕಂಪನಿಯ ಕಾರ್ಮಿಕರಿಗೆ ಹೊಸ ವೇತನ ಒಪ್ಪಂದದ ಪ್ರಕಾರ ಶೇ 27ರಷ್ಟು ಹೆಚ್ಚಳವಾಗಲಿದ್ದು, ಶೀಘ್ರದಲ್ಲಿ ಜಾರಿಗೆ ಬರಲಿದೆ’ ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಹೇಳಿದರು.</p>.<p>ಹಟ್ಟಿ ಪಟ್ಟಣಸ ಕೋಠಾ ಕ್ರಾಸ್ ಬಳಿ ಇರುವ ಪೈ ಭವನದಲ್ಲಿ ಹಮ್ಮಿಕೊಂಡಿದ್ದ ಭಾನುವಾರ ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕ್ರೀಡಾಕೂಟದ ಸಮಾರೋಪ ಹಾಗೂ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಈಗಾಗಲೇ ಹೊಸ ವೇತನ ಒಪ್ಪಂದಗಳಿಗೆ ಗಣಿ ಆಡಳಿತ ಕಂಪನಿ ವೇತನ ಹೆಚ್ಚಳ ಮಾಡಲು ಭರವಸೆ ನೀಡಿದೆ. ಹೊಸ ವೇತನ ಒಪ್ಪಂದಂತೆ ಆದಷ್ಟು ಬೇಗ ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳು ಸಿಗಲಿವೆ ಎಂದು ತಿಳಿಸಿದರು.</p>.<p>ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಎಂ ಶಫೀ ಮಾತನಾಡಿ, ಕಾರ್ಮಿಕರ ಬಹುದಿನದ ಬೇಡಿಕೆಯಾದ ಅನ್ ಫೀಟ್ ಯೋಜನೆ ಜಾರಿಯಾಗಿದ್ದು, ಕಾರ್ಮಿಕ ಮಕ್ಕಳಿಗೆ ಉದ್ಯೋಗ ದೊರೆಯಲಿದೆ. ಈ ಹಿಂದೆ ಇದ್ದ ಸಂಘಟನೆ ಅನ್ ಪೀಟ್ ಯೋಜನೆ ಜಾರಿ ಮಾಡುವಲ್ಲಿ ವಿಫಲವಾಗಿತ್ತು. ಚುನಾವಣೆಯಲ್ಲಿ ನೀಡದ ಭರವಸೆಯಂತೆ ಕಾರ್ಮಿಕ ಮಕ್ಕಳಿಗೆ ಉದ್ಯೋಗ ಸಿಗಲಿದೆ. ಇದು ಎಐಟಿಯುಸಿ ಸಂಘಟನೆ ಹೋರಾಟದ ಪ್ರತಿಫಲವಾಗಿದೆ ಎಂದರು.</p>.<p>ಡಿ.ಎಚ್. ಕಂಬಳಿ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಮಿಕ ವಿರೋದಿ ನೀತಿಗಳನ್ನು ಜಾರಿಗೆ ತರುವ ಹುನ್ನಾರ ನಡೆಸುತ್ತಿತ್ತು. ದುಡಿಯುವ ವರ್ಗದ ಹೋರಾಟ ಜೋರಾದಾಗ ತಟಸ್ಧವಾಗಿವೆ. ದೇಶವನ್ನು ಖಾಸಗಿ ಕಂಪನಿಗೆ ನೀಡಿ ದಿವಾಳಿ ಮಾಡಲು ಹೊರಟಿದೆ ಎಂದು ಆರೋಪ ಮಾಡಿದರು.</p>.<p>ಈ ವೇಳೆ ಎಐಟಿಯುಸಿ ರಾಜ್ಯ ಸಮಿತಿಯ ಪದಾಧಿಕಾರಿಗಳಾದ ಆದಿಮೂರ್ತಿ, ಜಿಲ್ಲಾಧ್ಯಕ್ಷ ಭಾಷುಮಿಯಾ, ಶ್ರೀಶೈಲ ರೆಡ್ಡಿ, ಚಂದ್ರಶೇಖರ್ ಕ್ಯಾತನಟ್ಟಿ, ಲಲಿತಮ್ಮ ಹನುಮಂತ ರೆಡ್ಡಿ, ಶಿವಕುಮಾರ, ಎಐಟಿಯುಸಿ ಸಂಘದ ಅಧ್ಯಕ್ಷ ಶಾಂತಪ್ಪ ಆನ್ವರಿ, ಚಂದ್ರಶೇಖರ, ಯಂಕೋಬ ಮಿಯ್ಯಾಪೂರ, ಮೈನುದ್ದಿನ್, ಪದಾಧಿಕಾರಿಗಳು ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>