ಸಿರವಾರ (ರಾಯಚೂರು ಜಿಲ್ಲೆ): ಬೆಂಗಳೂರಿನಿಂದ ರಾಯಚೂರಿನತ್ತ ಬರುತ್ತಿದ್ದ ಕ್ರೂಸರ್ ತುಮಕೂರು ಜಿಲ್ಲೆ ಸಿರಾ ಸಮೀಪ ಮಗುಚಿದ ಪರಿಣಾಮ, ಇಬ್ಬರು ಮಹಿಳೆಯರು ಸೇರಿ ಮೂವರು ಕೂಲಿಕಾರ್ಮಿಕರು ಸ್ಥಳದಲ್ಲೆ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ಚಾಲಕ ಸೇರಿದಂತೆ ಏಳು ಜನರು ಗಾಯಗೊಂಡಿದ್ದು, ಸಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.