<p><strong>ರಾಯಚೂರು</strong>: ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಪ್ರಯುಕ್ತ ಮಂತ್ರಾಲಯ ಮಠದಲ್ಲಿ ಮಂಗಳವಾರ ಸುಬುಧೇಂದ್ರ ತೀರ್ಥ ಶ್ರೀಗಳ ನೇತೃತ್ವದಲ್ಲಿ ರಾಯರ ಪೂರ್ವಾರಾಧನೆ ನಡೆಯಿತು.</p><p>ಬೆಳಗಿನ ಜಾವ ಸುಪ್ರಭಾತದೊಂದಿಗೆ ಧಾರ್ಮಿಕ ಕಾರ್ಯಗಳು ಆರಂಭವಾದವು. ಪಂಚಾಮೃತ ಅಭಿಷೇಕ, ಉತ್ಸವ ರಾಯರ ಪಾದಪೂಜೆ, ರಜತ ಸಿಂಹವಾಹನೋತ್ಸವ ಇನ್ನಿತರ ಧಾರ್ಮಿಕ ಕಾರ್ಯಗಳು ವಿಧಿವತ್ತಾಗಿ ಸಂಪನ್ನಗೊಂಡವು.</p><p>ನಂತರ ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿ ಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಮೆರವಣಿಗೆ ಮಾಡಲಾಯಿತು.</p><p>ತಮಿಳುನಾಡು ಸರ್ಕಾರದ ನಿರ್ದೇಶನದಂತೆ ಅಲ್ಲಿಯ ಮುಜರಾಯಿ ಇಲಾಖೆಯ ಅಧಿಕಾರಿಗಳು ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನದಿಂದ ರಾಯರಿಗೆ ಶೇಷ ವಸ್ತ್ರ ಹಾಗೂ ಗಂಧ ತಂದು ಮಠಾಧೀಶರಿಗೆ ಒಪ್ಪಿಸಿದರು.</p><p>ಇದಕ್ಕೂ ಮೊದಲು ತಮಿಳುನಾಡಿನ ಶ್ರೀರಂಗಂನಿಂದ ತರಲಾದ ವಸ್ತ್ರವನ್ನು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹಾಗೂ ಮಠದ ಅಧಿಕಾರಿಗಳು ವಿವಿಧ ಕಲಾ-ತಂಡಗಳ ವಾದ್ಯಗಳೊಂದಿಗೆ ಸ್ವಾಗತಿಸಿ ಬರಮಾಡಿಕೊಂಡರು.</p><p>ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಮಹಾರಾಷ್ಟ್ರದಿಂದ ಆಗಮಿಸಿರುವ ಭಕ್ತರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಪ್ರಯುಕ್ತ ಮಂತ್ರಾಲಯ ಮಠದಲ್ಲಿ ಮಂಗಳವಾರ ಸುಬುಧೇಂದ್ರ ತೀರ್ಥ ಶ್ರೀಗಳ ನೇತೃತ್ವದಲ್ಲಿ ರಾಯರ ಪೂರ್ವಾರಾಧನೆ ನಡೆಯಿತು.</p><p>ಬೆಳಗಿನ ಜಾವ ಸುಪ್ರಭಾತದೊಂದಿಗೆ ಧಾರ್ಮಿಕ ಕಾರ್ಯಗಳು ಆರಂಭವಾದವು. ಪಂಚಾಮೃತ ಅಭಿಷೇಕ, ಉತ್ಸವ ರಾಯರ ಪಾದಪೂಜೆ, ರಜತ ಸಿಂಹವಾಹನೋತ್ಸವ ಇನ್ನಿತರ ಧಾರ್ಮಿಕ ಕಾರ್ಯಗಳು ವಿಧಿವತ್ತಾಗಿ ಸಂಪನ್ನಗೊಂಡವು.</p><p>ನಂತರ ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿ ಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಮೆರವಣಿಗೆ ಮಾಡಲಾಯಿತು.</p><p>ತಮಿಳುನಾಡು ಸರ್ಕಾರದ ನಿರ್ದೇಶನದಂತೆ ಅಲ್ಲಿಯ ಮುಜರಾಯಿ ಇಲಾಖೆಯ ಅಧಿಕಾರಿಗಳು ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನದಿಂದ ರಾಯರಿಗೆ ಶೇಷ ವಸ್ತ್ರ ಹಾಗೂ ಗಂಧ ತಂದು ಮಠಾಧೀಶರಿಗೆ ಒಪ್ಪಿಸಿದರು.</p><p>ಇದಕ್ಕೂ ಮೊದಲು ತಮಿಳುನಾಡಿನ ಶ್ರೀರಂಗಂನಿಂದ ತರಲಾದ ವಸ್ತ್ರವನ್ನು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹಾಗೂ ಮಠದ ಅಧಿಕಾರಿಗಳು ವಿವಿಧ ಕಲಾ-ತಂಡಗಳ ವಾದ್ಯಗಳೊಂದಿಗೆ ಸ್ವಾಗತಿಸಿ ಬರಮಾಡಿಕೊಂಡರು.</p><p>ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಮಹಾರಾಷ್ಟ್ರದಿಂದ ಆಗಮಿಸಿರುವ ಭಕ್ತರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>