ಶಕ್ತಿನಗರ: ಗಣೇಶ ಹಬ್ಬದ ಪ್ರಯುಕ್ತ ಶಕ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 36 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಶಕ್ತಿನಗರ, ಡಿ.ಯದ್ಲಾಪುರ ಮತ್ತು ದೇವಸೂಗೂರು ಗ್ರಾಮದ ವಾರ್ಡ್ಗಳಲ್ಲಿ ಗಣೇಶ ಮೂರ್ತಿಗಳನ್ನು ಕೂರಿಸಲಾಗಿದೆ.
ಗಜಾನನ ಯುವಕ ಮಂಡಳಿಗಳು, ಯುವಕರು, ಮಕ್ಕಳು ಮತ್ತು ವಿವಿಧ ಸಂಘದ ಪದಾಧಿಕಾರಿಗಳು ಟ್ರ್ಯಾಕ್ಟರ್ ಮತ್ತು ಇನ್ನಿತರ ವಾಹನಗಳಲ್ಲಿ ಮೂರ್ತಿಗಳನ್ನು ಮೆರವಣಿಗೆ ನಡೆಸಿ ಕೂರಿಸಿದರು. ಗಣೇಶ ಬಪ್ಪ ಮೋರಿಯಾ ಎಂದು ಜೈಕಾರ ಹಾಕುತ್ತಾ ತಮ್ಮ ಭಕ್ತಿಯನ್ನು ವಿಘ್ನ ನಿವಾರಕನಿಗೆ ಸಮರ್ಪಿಸಿದರು. ವಿವಿಧ ಸ್ಥಳಗಳಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಂದೋಬಸ್ತ್ ಕಲ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.