<p><strong>ರಾಯಚೂರು:</strong> ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಕಲ್ಪಿಸಿದರೂ ಅದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರವೇ ಅನೇಕ ಗೊಂದಲ ಸೃಷ್ಟಿ ಮಾಡುತ್ತಿದೆ. ಈ ಭಾಗದ ಯುವ ಸಮುದಾಯ ಸಂಘಟಿತರಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಜನಸಂಗ್ರಾಮ ಪರಿಷತ್ನ ಮುಖಂಡ ರಾಘವೇಂದ್ರ ಕುಷ್ಟಗಿ ಆರೋಪಿಸಿದರು.<br /> <br /> ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳದ 2ನೇ ಗೋಷ್ಠಿಯಲ್ಲಿ `ವರ್ತಮಾನ ತಲ್ಲಣಗಳು' ಎಂಬ ವಿಷಯ ಕುರಿತ ಗೋಷ್ಠಿಯ ಅಧ್ಯಕ್ಷತೆವಹಿಸಿ ಮಾತನಾಡಿದರು.<br /> <br /> ಹೈದರಾಬಾದ್ ಕರ್ನಾಟಕ ಹೋರಾಟದ ಬಗ್ಗೆ ಮಾಹಿತಿ ಇಲ್ಲದವರನ್ನು ಕಾನೂನು ರೂಪಿಸುವ ಉದ್ದೇಶದಿಂದ ರಚಿಸಿರುವ ಸಂಪುಟ ಸಮಿತಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಸರ್ಕಾರ ಜನರಿಗೆ ಆರೋಗ್ಯಕ್ಕೆ ಪೂರಕವಾಗುವ ಯೋಜನೆಗಳನ್ನು ರೂಪಿಸುತ್ತಿಲ್ಲ. ಆರೋಗ್ಯ ಕ್ಷೇತ್ರದ ಉದ್ಯಮವಾಗಿ ಪರಿವರ್ತನೆಗೊಂಡಿದ್ದು, ಜನರ ಆರೋಗ್ಯದ ಬಗ್ಗೆ ಸರ್ಕಾರಗಳು ಗಮನಹರಿಸುತ್ತಿಲ್ಲ. ವೈದ್ಯರನ್ನು ಔಷಧಿ ಉತ್ಪಾದನಾ ಕಂಪೆನಿಗಳು ನಿಯಂತ್ರಿಸುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಪಾದಿಸಿದರು.<br /> <br /> ಸಂವಿಧಾನದ 371ನೇ ಕಲಂ ಜಾರಿಗೆ ಅನೇಕ ಹೋರಾಟಗಳನ್ನು ಮಾಡಲಾಗಿದೆ. ಅದರ ಕಾನೂನುಗಳ ಜಾರಿಗೂ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 371(ಜೆ) ಕಲಂ ಜಾರಿಯಿಂದ ಈ ಭಾಗದ ಯುವಕರಿಗೆ ಹೆಚ್ಚು ಅನುಕೂಲ. ಹೀಗಾಗಿ ಆ ಯುವ ಸಮುದಾಯವೇ ಹೋರಾಟಕ್ಕೆ ಮುಂದಾಗಬೇಕು ಎಂದು ಹೇಳಿದರು.<br /> <br /> ಹೈದರಾಬಾದ್ ಕರ್ನಾಟಕ ಪ್ರದೇಶದ ಜ್ವಲಂತ ಸಮಸ್ಯೆಗಳ ಕುರಿತು ಮನವರಿಕೆ ಮಾಡುವ ನಿಟ್ಟಿನಲ್ಲಿ ಜುಲೈ 6ರಂದು ಸಚಿವ ಎಚ್.ಕೆ ಪಾಟೀಲ್ ಅವರನ್ನು ಆಹ್ವಾನಿಸಲಾಗುವುದು. ಈ ಭಾಗದ ಸಮಸ್ಯೆಗಳನ್ನು ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.<br /> <br /> ತುಂಗಭದ್ರಾ ಎಡದಂಡೆ ಕಾಲುವೆಯ ಮೇಲ್ಭಾಗದ ರೈತರು ಅಕ್ರಮವಾಗಿ ಬೆಳೆ ಪ್ರದೇಶವನ್ನು ವಿಸ್ತರಣೆ ಮಾಡಿಕೊಂಡಿದ್ದಾರೆ. ಅನಧಿಕೃತವಾದ ಕೆರೆಗಳಲ್ಲಿ ನೀರು ಸಂಗ್ರಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ರಾಯಚೂರು ತಾಲ್ಲೂಕಿನ ಕೆಳಭಾಗದ ರೈತರ ಜಮೀನುಗಳಿಗೆ ನೀರಿಲ್ಲದಂತಾಗಿದೆ.ಇದಕ್ಕೆಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಮುಖ್ಯಕಾರಣ ಎಂದು ಸಮಸ್ಯೆ ವಿವರಿಸಿದರು.<br /> <br /> `ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳು -ಕಾರಣ ಮತ್ತು ಪರಿಹಾರ' ಎಂಬ ವಿಷಯ ಕುರಿತು ಡಾ. ಸುರೇಶ್ ವಿ.ಸಗರದ, `ಕೃಷಿ ನೀರಾವರಿ ಮತ್ತು ವಿದ್ಯುತ್ ಬಿಕ್ಕಟ್ಟುಗಳು' ಎಂಬ ಕುರಿತು ಪತ್ರಕರ್ತ ಕೆ.ಸತ್ಯನಾರಾಯಣ, `371ನೇ ಕಲಂ ಸಮರ್ಪಕ ಅನುಷ್ಠಾನ-ನಮ್ಮ ಪಾತ್ರ' ಎಂಬ ವಿಷಯ ಕುರಿತು ಡಾ.ರಜಾಕ್ ಉಸ್ತಾದ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಕಲ್ಪಿಸಿದರೂ ಅದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರವೇ ಅನೇಕ ಗೊಂದಲ ಸೃಷ್ಟಿ ಮಾಡುತ್ತಿದೆ. ಈ ಭಾಗದ ಯುವ ಸಮುದಾಯ ಸಂಘಟಿತರಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಜನಸಂಗ್ರಾಮ ಪರಿಷತ್ನ ಮುಖಂಡ ರಾಘವೇಂದ್ರ ಕುಷ್ಟಗಿ ಆರೋಪಿಸಿದರು.<br /> <br /> ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳದ 2ನೇ ಗೋಷ್ಠಿಯಲ್ಲಿ `ವರ್ತಮಾನ ತಲ್ಲಣಗಳು' ಎಂಬ ವಿಷಯ ಕುರಿತ ಗೋಷ್ಠಿಯ ಅಧ್ಯಕ್ಷತೆವಹಿಸಿ ಮಾತನಾಡಿದರು.<br /> <br /> ಹೈದರಾಬಾದ್ ಕರ್ನಾಟಕ ಹೋರಾಟದ ಬಗ್ಗೆ ಮಾಹಿತಿ ಇಲ್ಲದವರನ್ನು ಕಾನೂನು ರೂಪಿಸುವ ಉದ್ದೇಶದಿಂದ ರಚಿಸಿರುವ ಸಂಪುಟ ಸಮಿತಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಸರ್ಕಾರ ಜನರಿಗೆ ಆರೋಗ್ಯಕ್ಕೆ ಪೂರಕವಾಗುವ ಯೋಜನೆಗಳನ್ನು ರೂಪಿಸುತ್ತಿಲ್ಲ. ಆರೋಗ್ಯ ಕ್ಷೇತ್ರದ ಉದ್ಯಮವಾಗಿ ಪರಿವರ್ತನೆಗೊಂಡಿದ್ದು, ಜನರ ಆರೋಗ್ಯದ ಬಗ್ಗೆ ಸರ್ಕಾರಗಳು ಗಮನಹರಿಸುತ್ತಿಲ್ಲ. ವೈದ್ಯರನ್ನು ಔಷಧಿ ಉತ್ಪಾದನಾ ಕಂಪೆನಿಗಳು ನಿಯಂತ್ರಿಸುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಪಾದಿಸಿದರು.<br /> <br /> ಸಂವಿಧಾನದ 371ನೇ ಕಲಂ ಜಾರಿಗೆ ಅನೇಕ ಹೋರಾಟಗಳನ್ನು ಮಾಡಲಾಗಿದೆ. ಅದರ ಕಾನೂನುಗಳ ಜಾರಿಗೂ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 371(ಜೆ) ಕಲಂ ಜಾರಿಯಿಂದ ಈ ಭಾಗದ ಯುವಕರಿಗೆ ಹೆಚ್ಚು ಅನುಕೂಲ. ಹೀಗಾಗಿ ಆ ಯುವ ಸಮುದಾಯವೇ ಹೋರಾಟಕ್ಕೆ ಮುಂದಾಗಬೇಕು ಎಂದು ಹೇಳಿದರು.<br /> <br /> ಹೈದರಾಬಾದ್ ಕರ್ನಾಟಕ ಪ್ರದೇಶದ ಜ್ವಲಂತ ಸಮಸ್ಯೆಗಳ ಕುರಿತು ಮನವರಿಕೆ ಮಾಡುವ ನಿಟ್ಟಿನಲ್ಲಿ ಜುಲೈ 6ರಂದು ಸಚಿವ ಎಚ್.ಕೆ ಪಾಟೀಲ್ ಅವರನ್ನು ಆಹ್ವಾನಿಸಲಾಗುವುದು. ಈ ಭಾಗದ ಸಮಸ್ಯೆಗಳನ್ನು ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.<br /> <br /> ತುಂಗಭದ್ರಾ ಎಡದಂಡೆ ಕಾಲುವೆಯ ಮೇಲ್ಭಾಗದ ರೈತರು ಅಕ್ರಮವಾಗಿ ಬೆಳೆ ಪ್ರದೇಶವನ್ನು ವಿಸ್ತರಣೆ ಮಾಡಿಕೊಂಡಿದ್ದಾರೆ. ಅನಧಿಕೃತವಾದ ಕೆರೆಗಳಲ್ಲಿ ನೀರು ಸಂಗ್ರಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ರಾಯಚೂರು ತಾಲ್ಲೂಕಿನ ಕೆಳಭಾಗದ ರೈತರ ಜಮೀನುಗಳಿಗೆ ನೀರಿಲ್ಲದಂತಾಗಿದೆ.ಇದಕ್ಕೆಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಮುಖ್ಯಕಾರಣ ಎಂದು ಸಮಸ್ಯೆ ವಿವರಿಸಿದರು.<br /> <br /> `ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳು -ಕಾರಣ ಮತ್ತು ಪರಿಹಾರ' ಎಂಬ ವಿಷಯ ಕುರಿತು ಡಾ. ಸುರೇಶ್ ವಿ.ಸಗರದ, `ಕೃಷಿ ನೀರಾವರಿ ಮತ್ತು ವಿದ್ಯುತ್ ಬಿಕ್ಕಟ್ಟುಗಳು' ಎಂಬ ಕುರಿತು ಪತ್ರಕರ್ತ ಕೆ.ಸತ್ಯನಾರಾಯಣ, `371ನೇ ಕಲಂ ಸಮರ್ಪಕ ಅನುಷ್ಠಾನ-ನಮ್ಮ ಪಾತ್ರ' ಎಂಬ ವಿಷಯ ಕುರಿತು ಡಾ.ರಜಾಕ್ ಉಸ್ತಾದ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>