<p><strong>ದೇವದುರ್ಗ:</strong> ಕೋವಿಡ್ನಿಂದ ಈಚೆಗೆ ಮೃತಪಟ್ಟತಾಲ್ಲೂಕಿನ ಕೋತಿಗುಡ್ಡ ಗ್ರಾಮದ ಶಿವಪ್ಪ ಬಲ್ಲಿದವ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ 38 ಸಂಬಂಧಿಗಳನ್ನು ತಾಲ್ಲೂಕು ಆಡಳಿತವು ಹೋಂ ಕ್ವಾರಂಟೈನ್ ಮಾಡಿದೆ.</p>.<p>ಅಂತ್ಯಸಂಸ್ಕಾರದಲ್ಲಿ ಭಾಗಿಯಾದವರ ಮಾಹಿತಿ ಸಂಗ್ರಹಕ್ಕಾಗಿ ತಂಡ ರಚಿಸಲಾಗಿತ್ತು. ಇದೀಗ ಹೋಂ ಕ್ವಾರಂಟೈನ್ ಇರಬೇಕಾದವರ ಕೈ ಮಣಿಕಟ್ಟಿಗೆ ಮುದ್ರೆ ಹಾಕಲಾಗಿದೆ ಎಂದು ತಹಶೀಲ್ದಾರ್ ಮಧುರಾಜ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಜಾಗೃತಿ ಮೂಡಿಸಲಾಗಿದೆ. ಗ್ರಾಮದಲ್ಲಿನ ಸಾರ್ವಜನಿಕ ಕೊಳೆಬಾವಿಯನ್ನು ಬಳಸದಂತೆ ಸೂಚಿಸಲಾಗಿದೆ. ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ತೊಂದರೆ ಎದುರಾಗಬಾರದು ಎಂಬ ಕಾರಣಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ಮುಂಬೈನಿಂದ ಮೇ 21 ರಂದು ಬಂದಿದ್ದ ಮೃತ ಶಿವಪ್ಪ ಅವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಕಳುಹಿಸಲಾಗಿತ್ತು. ವರದಿ ನೆಗೆಟಿವ್ ಬಂದಿತ್ತು. ಆದರೆ, ಮೇ 28 ರಂದು ಕೋವಿಡ್ ಲಕ್ಷಣಗಳು ಕಾಣಿಸಿದ್ದರಿಂದ ದೇವದುರ್ಗದ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಿಂದ ರಾಯಚೂರು ಒಪೆಕ್ಗೆ ಸ್ಥಳಾಂತರಿಸಲಾಗಿತ್ತು. ಮೇ 29 ರಂದು ಆಸ್ಪತ್ರೆಯಲ್ಲಿ ಮೃತಪಟ್ಟದ್ದರಿಂದ ಮತ್ತೆ ಗಂಟಲು ದ್ರುವ ಪರೀಕ್ಷೆಗೆ ಕಳುಹಿಸಿದಾಗ, ಪಾಸಿಟಿವ್ ವರದಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ:</strong> ಕೋವಿಡ್ನಿಂದ ಈಚೆಗೆ ಮೃತಪಟ್ಟತಾಲ್ಲೂಕಿನ ಕೋತಿಗುಡ್ಡ ಗ್ರಾಮದ ಶಿವಪ್ಪ ಬಲ್ಲಿದವ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ 38 ಸಂಬಂಧಿಗಳನ್ನು ತಾಲ್ಲೂಕು ಆಡಳಿತವು ಹೋಂ ಕ್ವಾರಂಟೈನ್ ಮಾಡಿದೆ.</p>.<p>ಅಂತ್ಯಸಂಸ್ಕಾರದಲ್ಲಿ ಭಾಗಿಯಾದವರ ಮಾಹಿತಿ ಸಂಗ್ರಹಕ್ಕಾಗಿ ತಂಡ ರಚಿಸಲಾಗಿತ್ತು. ಇದೀಗ ಹೋಂ ಕ್ವಾರಂಟೈನ್ ಇರಬೇಕಾದವರ ಕೈ ಮಣಿಕಟ್ಟಿಗೆ ಮುದ್ರೆ ಹಾಕಲಾಗಿದೆ ಎಂದು ತಹಶೀಲ್ದಾರ್ ಮಧುರಾಜ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಜಾಗೃತಿ ಮೂಡಿಸಲಾಗಿದೆ. ಗ್ರಾಮದಲ್ಲಿನ ಸಾರ್ವಜನಿಕ ಕೊಳೆಬಾವಿಯನ್ನು ಬಳಸದಂತೆ ಸೂಚಿಸಲಾಗಿದೆ. ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ತೊಂದರೆ ಎದುರಾಗಬಾರದು ಎಂಬ ಕಾರಣಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ಮುಂಬೈನಿಂದ ಮೇ 21 ರಂದು ಬಂದಿದ್ದ ಮೃತ ಶಿವಪ್ಪ ಅವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಕಳುಹಿಸಲಾಗಿತ್ತು. ವರದಿ ನೆಗೆಟಿವ್ ಬಂದಿತ್ತು. ಆದರೆ, ಮೇ 28 ರಂದು ಕೋವಿಡ್ ಲಕ್ಷಣಗಳು ಕಾಣಿಸಿದ್ದರಿಂದ ದೇವದುರ್ಗದ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಿಂದ ರಾಯಚೂರು ಒಪೆಕ್ಗೆ ಸ್ಥಳಾಂತರಿಸಲಾಗಿತ್ತು. ಮೇ 29 ರಂದು ಆಸ್ಪತ್ರೆಯಲ್ಲಿ ಮೃತಪಟ್ಟದ್ದರಿಂದ ಮತ್ತೆ ಗಂಟಲು ದ್ರುವ ಪರೀಕ್ಷೆಗೆ ಕಳುಹಿಸಿದಾಗ, ಪಾಸಿಟಿವ್ ವರದಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>