<p><strong>ಮಸ್ಕಿ: </strong>‘ತಾಲ್ಲೂಕಿನ ಪಾಮನಕೆಲ್ಲೂರು, ಅಂಕುಶದೊಡ್ಡಿ, ವಟಗಲ್, ಅಮಿನಗಡ ಸೇರಿದಂತೆ ವಿವಿಧ ಗ್ರಾಮಗಳ ಬಹುದಿನದ ಬೇಡಿಕೆಯಾಗಿರುವ ನಾರಾಯಣಪೂರ ಬಲದಂಡೆಯ 5 (ಎ) ಕಾಲುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ‘ ಎಂದು ಶಾಸಕ ಆರ್. ಬಸನಗೌಡ ಹೇಳಿದರು.</p>.<p>ಪಟ್ಟಣದ ಬಸವೇಶ್ವರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸೆ. 7 ರಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಕ್ಷದ ವರಿಷ್ಠರ ಗಮನಕ್ಕೆ 5 (ಎ) ಕಾಲುವೆ ಯೋಜನೆ ಜಾರಿ ಬಗ್ಗೆ ಗಮನಕ್ಕೆ ತರಲಾಗುವುದು. ಬರುವ ವಿಧಾನಸಭಾ ಅಧಿವೇಶನದಲ್ಲಿಯೂ ಸಹ ಯೋಜನೆ ಬಗ್ಗೆ ಸರ್ಕಾರದ ಗಮನ ಸೆಳೆಯುವೆ‘ ಎಂದರು.</p>.<p>‘ವಟಗಲ್ ಬಸವೇಶ್ವರ ಏತ ನೀರಾವರಿ ಯೋಜನೆ ಸರ್ವೆ ನಿಲ್ಲಿಸುವಂತೆ ಆ ಭಾಗದ ರೈತರು ಒತ್ತಾಯಿಸಿದ್ದರಿಂದ ಸರ್ವೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಮೌಖಿಕವಾಗಿ ಸೂಚಿಸಿದ್ದೇನೆಯೇ ಹೊರತು ಯಾವುದೇ ಪತ್ರ ಬರೆದಿಲ್ಲ‘ ಎಂದು ಸ್ಪಷ್ಟಪಡಿಸಿದರು.</p>.<p>ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ಎರಡು ಅಂಬುಲೈನ್ ಖರೀದಿಸಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅನುದಾನದಲ್ಲಿ 1 ಅಂಬುಲೈನ್ಸ್ ಖರೀದಿಗೆ ಅನುದಾನ ನೀಡಿದ್ದು ಶೀಘ್ರ ಟೆಂಡರ್ ಕರೆದು ಖರೀದಿಸಲಾಗುವುದು. ಮೂರು ಅಂಬುಲೈನ್ಸ್ಗಳನ್ನು ಶೀಘ್ರ ಲೋಕಾರ್ಪಣೆ ಮಾಡಲಾಗುವುದು ಎಂದರು.</p>.<div><p>ಪಕ್ಷದ ನಗರ ಬ್ಲಾಕ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ. ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಮುಖಂಡ ಸಿದ್ದನಗೌಡ ಮಾಟೂರು, ಮೈಬುದಾಬ ಮುದ್ದಾಪೂರ ಇತರರು ಇದ್ದರು.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>‘ತಾಲ್ಲೂಕಿನ ಪಾಮನಕೆಲ್ಲೂರು, ಅಂಕುಶದೊಡ್ಡಿ, ವಟಗಲ್, ಅಮಿನಗಡ ಸೇರಿದಂತೆ ವಿವಿಧ ಗ್ರಾಮಗಳ ಬಹುದಿನದ ಬೇಡಿಕೆಯಾಗಿರುವ ನಾರಾಯಣಪೂರ ಬಲದಂಡೆಯ 5 (ಎ) ಕಾಲುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ‘ ಎಂದು ಶಾಸಕ ಆರ್. ಬಸನಗೌಡ ಹೇಳಿದರು.</p>.<p>ಪಟ್ಟಣದ ಬಸವೇಶ್ವರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸೆ. 7 ರಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಕ್ಷದ ವರಿಷ್ಠರ ಗಮನಕ್ಕೆ 5 (ಎ) ಕಾಲುವೆ ಯೋಜನೆ ಜಾರಿ ಬಗ್ಗೆ ಗಮನಕ್ಕೆ ತರಲಾಗುವುದು. ಬರುವ ವಿಧಾನಸಭಾ ಅಧಿವೇಶನದಲ್ಲಿಯೂ ಸಹ ಯೋಜನೆ ಬಗ್ಗೆ ಸರ್ಕಾರದ ಗಮನ ಸೆಳೆಯುವೆ‘ ಎಂದರು.</p>.<p>‘ವಟಗಲ್ ಬಸವೇಶ್ವರ ಏತ ನೀರಾವರಿ ಯೋಜನೆ ಸರ್ವೆ ನಿಲ್ಲಿಸುವಂತೆ ಆ ಭಾಗದ ರೈತರು ಒತ್ತಾಯಿಸಿದ್ದರಿಂದ ಸರ್ವೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಮೌಖಿಕವಾಗಿ ಸೂಚಿಸಿದ್ದೇನೆಯೇ ಹೊರತು ಯಾವುದೇ ಪತ್ರ ಬರೆದಿಲ್ಲ‘ ಎಂದು ಸ್ಪಷ್ಟಪಡಿಸಿದರು.</p>.<p>ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ಎರಡು ಅಂಬುಲೈನ್ ಖರೀದಿಸಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅನುದಾನದಲ್ಲಿ 1 ಅಂಬುಲೈನ್ಸ್ ಖರೀದಿಗೆ ಅನುದಾನ ನೀಡಿದ್ದು ಶೀಘ್ರ ಟೆಂಡರ್ ಕರೆದು ಖರೀದಿಸಲಾಗುವುದು. ಮೂರು ಅಂಬುಲೈನ್ಸ್ಗಳನ್ನು ಶೀಘ್ರ ಲೋಕಾರ್ಪಣೆ ಮಾಡಲಾಗುವುದು ಎಂದರು.</p>.<div><p>ಪಕ್ಷದ ನಗರ ಬ್ಲಾಕ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ. ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಮುಖಂಡ ಸಿದ್ದನಗೌಡ ಮಾಟೂರು, ಮೈಬುದಾಬ ಮುದ್ದಾಪೂರ ಇತರರು ಇದ್ದರು.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>