ಬುಧವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುತ್ತೇವೆ. ಕ್ಷೇತ್ರದಲ್ಲಿ ಕೃಷ್ಣಾ ಬಲದಂಡೆ ನಾಲೆಗೆ 5ಎ ಉಪಕಾಲುವೆ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗಿದ್ದು, ಬೇಗನೆ ಪೂರ್ಣಗೊಳಿಸುತ್ತೇವೆ. ಮುಂದಿನ ಎರಡು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಲಾಗುವುದು. ನಂದವಾಡಗಿ ಏತನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು’ ಎಂದರು.