<p><strong>ಸಿರವಾರ:</strong> ‘ಕ್ಷಯ ರೋಗ ಪತ್ತೆಯಾದ ವ್ಯಕ್ತಿಗೆ ಆರು ತಿಂಗಳು ಉಚಿತ ಚಿಕಿತ್ಸೆ ನೀಡಿ ರೋಗ ಗುಣಪಡಿಸಲಾಗುವುದು’ ಎಂದು ಕ್ಷಯ ರೋಗ ಪತ್ತೆ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಅಮರೇಶ ನಾಯಕ ಹೇಳಿದರು.</p>.<p>ಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ನಡೆದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಹಾಗೂ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ವರ್ಷದಲ್ಲಿ ಎರಡು ಬಾರಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮ ಮಾಡುವ ಮೂಲಕ 2025ರ ವೇಳೆಗೆ ಕ್ಷಯರೋಗ ಮುಕ್ತ ರಾಜ್ಯ ಮತ್ತು ದೇಶ ಮಾಡುವ ಗುರಿ ಹೊಂದಿದ್ದು, ಅದನ್ನು ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಆಯುಷ್ ವೈದ್ಯಾಧಿಕಾರಿ ಸುನೀಲ್ ಸರೋದೆ ಮಾತನಾಡಿ,‘ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಜ್ವರ, ಕಫ, ಕಫದಲ್ಲಿ ರಕ್ತ ಬೀಳುವುದು, ಎದೆ ನೋವು, ಬೆವರು ಬರುವುದು, ಹಸಿವು ಆಗದೆ ಇರುವುದು, ತೂಕ ಕಡಿಮೆ ಆಗುವ ಲಕ್ಷಣಗಳು ಕಂಡುಬರುವ ಪ್ರತಿಯೊಬ್ಬರೂ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.</p>.<p>ಜಿಲ್ಲಾ ಪಿ.ಪಿ.ಎಂ.ಸಂಯೋಜಕ ಮೋಹಿನ ಪಾಷಾ, ಡಾ.ಪರಿಮಳ ಮೈತ್ರಿ, ಡಾ.ಪ್ರವೀಣ್ ಕುಮಾರ, ಡಾ.ಭಾರ್ಗವಿ ಜಾಗೀರದಾರ, ಡಾ.ಬಿ.ವಿ.ಸಿಂಗ್ ಹಾಗೂ ಕ್ಷಯರೋಗ ಮೇಲ್ವಿಚಾರಕ ಪ್ರೇಮ್ ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ‘ಕ್ಷಯ ರೋಗ ಪತ್ತೆಯಾದ ವ್ಯಕ್ತಿಗೆ ಆರು ತಿಂಗಳು ಉಚಿತ ಚಿಕಿತ್ಸೆ ನೀಡಿ ರೋಗ ಗುಣಪಡಿಸಲಾಗುವುದು’ ಎಂದು ಕ್ಷಯ ರೋಗ ಪತ್ತೆ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಅಮರೇಶ ನಾಯಕ ಹೇಳಿದರು.</p>.<p>ಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ನಡೆದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಹಾಗೂ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ವರ್ಷದಲ್ಲಿ ಎರಡು ಬಾರಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮ ಮಾಡುವ ಮೂಲಕ 2025ರ ವೇಳೆಗೆ ಕ್ಷಯರೋಗ ಮುಕ್ತ ರಾಜ್ಯ ಮತ್ತು ದೇಶ ಮಾಡುವ ಗುರಿ ಹೊಂದಿದ್ದು, ಅದನ್ನು ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಆಯುಷ್ ವೈದ್ಯಾಧಿಕಾರಿ ಸುನೀಲ್ ಸರೋದೆ ಮಾತನಾಡಿ,‘ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಜ್ವರ, ಕಫ, ಕಫದಲ್ಲಿ ರಕ್ತ ಬೀಳುವುದು, ಎದೆ ನೋವು, ಬೆವರು ಬರುವುದು, ಹಸಿವು ಆಗದೆ ಇರುವುದು, ತೂಕ ಕಡಿಮೆ ಆಗುವ ಲಕ್ಷಣಗಳು ಕಂಡುಬರುವ ಪ್ರತಿಯೊಬ್ಬರೂ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.</p>.<p>ಜಿಲ್ಲಾ ಪಿ.ಪಿ.ಎಂ.ಸಂಯೋಜಕ ಮೋಹಿನ ಪಾಷಾ, ಡಾ.ಪರಿಮಳ ಮೈತ್ರಿ, ಡಾ.ಪ್ರವೀಣ್ ಕುಮಾರ, ಡಾ.ಭಾರ್ಗವಿ ಜಾಗೀರದಾರ, ಡಾ.ಬಿ.ವಿ.ಸಿಂಗ್ ಹಾಗೂ ಕ್ಷಯರೋಗ ಮೇಲ್ವಿಚಾರಕ ಪ್ರೇಮ್ ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>