ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ವರ್ತುಲ ರಸ್ತೆ ನಿರ್ಮಾಣಕ್ಕೆ ₹ 80 ಕೋಟಿ: ವಿ.ಸೋಮಣ್ಣ

Last Updated 15 ಆಗಸ್ಟ್ 2021, 4:45 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ‌ನಗರಕ್ಕೆ ವರ್ತುಲ ರಸ್ತೆ ನಿರ್ಮಾಣಕ್ಕೆ ಬಜೆಟ್ ಮೂಲಕ‌ ರಾಜ್ಯ ಸರ್ಕಾರ ₹80 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಗೆ ಕಳೆದ ‌ನಾಲ್ಕು ವರ್ಷಗಳಲ್ಲಿ ₹114 ಕೋಟಿ ಬಿಡುಗಡೆಯಾಗಿದ್ದು, ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.

ವಸತಿ ಇಲಾಖೆಯಲ್ಲೂ ಕಳೆದ ಎರಡು ವರ್ಷಗಳಲ್ಲಿ ಅಭೂತ ಸಾಧನೆಯಾಗಿದೆ. 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ ಮಾಲೀಕತ್ವ ನೀಡಲಾಗುತ್ತಿದೆ. 9.74 ಲಕ್ಷ ಮನೆಗಳ‌ ನಿರ್ಮಾಣಕ್ ₹10,194 ಕೋಟಿ ಅನುದಾನ ಮೀಸಲಿಡಲಾಗಿದೆ. ಆಶ್ರಯ ಬಡಾವಣೆಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ₹500 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT