<p><strong>ದೇವದುರ್ಗ (ರಾಯಚೂರು ಜಿಲ್ಲೆ):</strong> ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಅರಕೇರಾ ತಾಲ್ಲೂಕಿನ ಭೋಗಿರಾಮನಗುಂಡ ಗ್ರಾಮದ ಬಾಣಂತಿ ಶಿವಮ್ಮ (29) ಮತ್ತು ಮಗು ಸೋಮವಾರ ಮೃತಪಟ್ಟಿದೆ.</p>.<p>ಗರ್ಭಿಣಿ ಶಿವಮ್ಮ ಅವರು ಪ್ರತಿ ತಿಂಗಳು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ ಕೊಳ್ಳುತ್ತಿದ್ದರು. ಹೆರಿಗೆಗಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ನೋವು ಹೆಚ್ಚಾದ ಕಾರಣ ಸ್ಟಾಫ್ ನರ್ಸ್ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಈ ವೇಳೆ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಸಿಬ್ಬಂದಿ ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಶಿವಮ್ಮ ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ರಕ್ತಸಾವ್ರ ಹೆಚ್ಚಾದ ಕಾರಣ ಮಾರ್ಗಮಧ್ಯದಲ್ಲಿ ತಾಯಿ ಮತ್ತು ಮಗು ಮೃತಪಟ್ಟಿದೆ.</p>.<p>‘ಬಾಣಂತಿ ಸಾವಿಗೆ ದೇವದುರ್ಗದ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ’ ಎಂದು ಮೃತರ ಸಹೋದರ ದುರುಗಪ್ಪ ಆರೋಪಿಸಿದ್ದಾರೆ.</p>.<p>‘ಶಿವಮ್ಮ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಆಗ ನಾನು ಆಸ್ಪತ್ರೆಯಲ್ಲಿ ಇರಲಿಲ್ಲ. ಆಂತರಿಕ ತನಿಖೆ ನಡೆಸಿದ್ದು, ಡಿಎಚ್ಒ ಅವರಿಗೆ ವರದಿ ನೀಡಲಾಗುವುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬನದೇಶ್ವರ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ (ರಾಯಚೂರು ಜಿಲ್ಲೆ):</strong> ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಅರಕೇರಾ ತಾಲ್ಲೂಕಿನ ಭೋಗಿರಾಮನಗುಂಡ ಗ್ರಾಮದ ಬಾಣಂತಿ ಶಿವಮ್ಮ (29) ಮತ್ತು ಮಗು ಸೋಮವಾರ ಮೃತಪಟ್ಟಿದೆ.</p>.<p>ಗರ್ಭಿಣಿ ಶಿವಮ್ಮ ಅವರು ಪ್ರತಿ ತಿಂಗಳು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ ಕೊಳ್ಳುತ್ತಿದ್ದರು. ಹೆರಿಗೆಗಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ನೋವು ಹೆಚ್ಚಾದ ಕಾರಣ ಸ್ಟಾಫ್ ನರ್ಸ್ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಈ ವೇಳೆ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಸಿಬ್ಬಂದಿ ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಶಿವಮ್ಮ ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ರಕ್ತಸಾವ್ರ ಹೆಚ್ಚಾದ ಕಾರಣ ಮಾರ್ಗಮಧ್ಯದಲ್ಲಿ ತಾಯಿ ಮತ್ತು ಮಗು ಮೃತಪಟ್ಟಿದೆ.</p>.<p>‘ಬಾಣಂತಿ ಸಾವಿಗೆ ದೇವದುರ್ಗದ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ’ ಎಂದು ಮೃತರ ಸಹೋದರ ದುರುಗಪ್ಪ ಆರೋಪಿಸಿದ್ದಾರೆ.</p>.<p>‘ಶಿವಮ್ಮ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಆಗ ನಾನು ಆಸ್ಪತ್ರೆಯಲ್ಲಿ ಇರಲಿಲ್ಲ. ಆಂತರಿಕ ತನಿಖೆ ನಡೆಸಿದ್ದು, ಡಿಎಚ್ಒ ಅವರಿಗೆ ವರದಿ ನೀಡಲಾಗುವುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬನದೇಶ್ವರ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>