<p><strong>ಲಿಂಗಸುಗೂರು:</strong> ತಾಲ್ಲೂಕಿನ ಜಾವೂರು ಕ್ರಾಸ್ ಬಳಿಯ ನಾರಾಯಣಪುರ ಬಲದಂಡೆ ಮುಖ್ಯ ನಾಲೆಗೆ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಜರುಗಿದೆ.</p>.<p>ತಾಲ್ಲೂಕಿನ ನಾಗರಹಾಳ ಗ್ರಾಮದ ಬಸವರಾಜ ಹುಸೇನಮ್ಮ (22) ಮೃತ ಯುವಕ.</p>.<p>ಬಿಸಿಲಿನ ಬೇಗೆ ತಡೆದುಕೊಳ್ಳಲಾಗದೆ ದೇಹ ತಂಪಾಗಿಸಿಕೊಳ್ಳಲು ಕಾಲುವೆಗೆ ಈಜಲು ತೆರಳಿದ್ದ ಎಂದು ಜನರು ತಿಳಿಸಿದ್ದಾರೆ.</p>.<p>ಅಗ್ನಿಶಾಮಕ ಠಾಣಾಧಿಕಾರಿ ಹೊನ್ನಪ್ಪ ದೊಡಮನಿ ನೇತೃತ್ವದಲ್ಲಿ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸ್ಥಳೀಯರ ಸಹಕಾರದಿಂದ ಮೃತದೇಹ ಹೊರ ತೆಗೆದಿದ್ದಾರೆ.</p>.<p>ಎರಡು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಬೆಂಡೋಣಿ ಗ್ರಾಮದ ಇಬ್ಬರು ಯುವಕರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ತಾಲ್ಲೂಕಿನ ಜಾವೂರು ಕ್ರಾಸ್ ಬಳಿಯ ನಾರಾಯಣಪುರ ಬಲದಂಡೆ ಮುಖ್ಯ ನಾಲೆಗೆ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಜರುಗಿದೆ.</p>.<p>ತಾಲ್ಲೂಕಿನ ನಾಗರಹಾಳ ಗ್ರಾಮದ ಬಸವರಾಜ ಹುಸೇನಮ್ಮ (22) ಮೃತ ಯುವಕ.</p>.<p>ಬಿಸಿಲಿನ ಬೇಗೆ ತಡೆದುಕೊಳ್ಳಲಾಗದೆ ದೇಹ ತಂಪಾಗಿಸಿಕೊಳ್ಳಲು ಕಾಲುವೆಗೆ ಈಜಲು ತೆರಳಿದ್ದ ಎಂದು ಜನರು ತಿಳಿಸಿದ್ದಾರೆ.</p>.<p>ಅಗ್ನಿಶಾಮಕ ಠಾಣಾಧಿಕಾರಿ ಹೊನ್ನಪ್ಪ ದೊಡಮನಿ ನೇತೃತ್ವದಲ್ಲಿ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸ್ಥಳೀಯರ ಸಹಕಾರದಿಂದ ಮೃತದೇಹ ಹೊರ ತೆಗೆದಿದ್ದಾರೆ.</p>.<p>ಎರಡು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಬೆಂಡೋಣಿ ಗ್ರಾಮದ ಇಬ್ಬರು ಯುವಕರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>