ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಸಾರಿಗೆ ವ್ಯವಸ್ಥೆಗೆ ಎಬಿವಿಪಿ ಆಗ್ರಹ

Last Updated 12 ಡಿಸೆಂಬರ್ 2020, 5:28 IST
ಅಕ್ಷರ ಗಾತ್ರ

ಲಿಂಗಸುಗೂರು: ಈಗಾಗಲೆ ಶಾಲಾ ಕಾಲೇಜುಗಳು ಆರಂಭಗೊಂಡಿವೆ. ಆದಾಗ್ಯೂ ಕೂಡ ಸಾರಿಗೆ ಸಂಸ್ಥೆ ಗ್ರಾಮೀಣ ಪ್ರದೇಶಗಳಿಗೆ ನಿಗದಿತ ಅವಧಿ ಆಧರಿಸಿ ಗ್ರಾಮೀಣ ಪ್ರದೇಶಗಳಿಗೆ ಬಸ್‍ ಓಡಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಕಾರ್ಯಕರ್ತರು ಆಗ್ರಹಿಸಿದರು.

ಗುರುವಾರ ಸಾರಿಗೆ ಸಂಸ್ಥೆ ಅಧಿಕಾರಿ ಶಿವನಗೌಡ ಅವರಿಗೆ ಮನವಿ ಸಲ್ಲಿಸಿದ ಅವರು, ಶಾಲಾ ಕಾಲೇಜು ಆರಂಭಗೊಂಡು ತಿಂಗಳು ಆದರು ಬಸ್‍ ವ್ಯವಸ್ಥೆ ಸರಿ ಹೋಗಿಲ್ಲ. ಬಸ್‍ಪಾಸ್‍ ಸೌಲಭ್ಯ ನೀಡದೆ ಹೋಗಿದ್ದರಿಂದ ವಿದ್ಯಾರ್ಥಿಗಳು ಹಣ ಪಾವತಿಸಿ ಕಾಲೇಜಿಗೆ ಬಂದು ಹೋಗಲು ಪರದಾಡುವಂತಾಗಿದ್ದು ಕೂಡಲೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಹೇಮಂತ. ಮುಖಂಡರಾದ ವಿಠಲ ಹುನಗುಂದ, ನೂರಜಾ, ಶಿಲ್ಪಾ, ಭವಾನಿ, ಈರಮ್ಮ, ಚೆನ್ನಮ್ಮ, ಯಲ್ಲಮ್ಮ, ನಾಗರತ್ನ, ಶಿವಮ್ಮ, ಶಿವರಾಜ, ಹನುಮಂತ, ಶಶಿಕುಮಾರ, ವೆಂಕಟೇಶ, ಉದಯಕುಮಾರ, ಸಂತೋಷ, ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT