ಲಿಂಗಸುಗೂರು: ಈಗಾಗಲೆ ಶಾಲಾ ಕಾಲೇಜುಗಳು ಆರಂಭಗೊಂಡಿವೆ. ಆದಾಗ್ಯೂ ಕೂಡ ಸಾರಿಗೆ ಸಂಸ್ಥೆ ಗ್ರಾಮೀಣ ಪ್ರದೇಶಗಳಿಗೆ ನಿಗದಿತ ಅವಧಿ ಆಧರಿಸಿ ಗ್ರಾಮೀಣ ಪ್ರದೇಶಗಳಿಗೆ ಬಸ್ ಓಡಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಕಾರ್ಯಕರ್ತರು ಆಗ್ರಹಿಸಿದರು.
ಗುರುವಾರ ಸಾರಿಗೆ ಸಂಸ್ಥೆ ಅಧಿಕಾರಿ ಶಿವನಗೌಡ ಅವರಿಗೆ ಮನವಿ ಸಲ್ಲಿಸಿದ ಅವರು, ಶಾಲಾ ಕಾಲೇಜು ಆರಂಭಗೊಂಡು ತಿಂಗಳು ಆದರು ಬಸ್ ವ್ಯವಸ್ಥೆ ಸರಿ ಹೋಗಿಲ್ಲ. ಬಸ್ಪಾಸ್ ಸೌಲಭ್ಯ ನೀಡದೆ ಹೋಗಿದ್ದರಿಂದ ವಿದ್ಯಾರ್ಥಿಗಳು ಹಣ ಪಾವತಿಸಿ ಕಾಲೇಜಿಗೆ ಬಂದು ಹೋಗಲು ಪರದಾಡುವಂತಾಗಿದ್ದು ಕೂಡಲೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿದರು.