ನಂತರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಡಿ.ಚಂದ್ರಶೇಖರಯ್ಯ ಅವರು, ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 2018 ರಲ್ಲಿ ₹1.2 ಕೋಟಿ ಸಿಸಿ ರಸ್ತೆಗಾಗಿ ಮಂಜೂರು ಮಾಡಿ ಕಾಮಗಾರಿ ನಿರ್ವಹಿಸುವ ಜವಾಬ್ದಾರಿಯನ್ನು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿತ್ತು. 2019 ರಲ್ಲಿ ₹ 82 ಲಕ್ಷ ಹಣ ಪಾವತಿಯಾಗಿದೆ. ಆದರೆ ರಸ್ತೆ ಗುಣಮಟ್ಟ ಮಾತ್ರ ತೃಪ್ತಿಕರವಾಗಿಲ್ಲ. ಇದರ ವಸ್ತು ಸ್ಥಿತಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ’ ತಿಳಿಸಿದರು.