ಡಬ್ಲುಪಿಐ ತಾಲ್ಲೂಕು ಘಟಕದ ಪದಾಧಿಕಾರಿಗಳು ಲಿಂಗಸುಗೂರು ತಾಲ್ಲೂಕು ತಹಸೀಲ್ದಾರ್ರಿಗೆ ಮಂಗಳವಾರ ಈ ಸಂಬಂಧ ಮನವಿ ಸಲ್ಲಿಸಿದರು.
ಗೋ ರಕ್ಷಣೆ ಹೆಸರಿನಲ್ಲಿ ನಿರ್ದಿಷ್ಟ ಸಮುದಾಯದ ವ್ಯಕ್ತಿಗಳನ್ನು ಗುರುತಿಸಿ ಹಿಂಸಿಸುವುದು, ಕೊಲೆ ಮಾಡುವುದು ಸೇರಿದಂತೆ ದೇಶದಾದ್ಯಂತ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತ ಸಾಗಿವೆ. ಇಂತಹ ಗುಂಡಾ ಸಂಸ್ಕೃತಿಗೆ ನಡೆಸುವ ಪಟ್ಟಭದ್ರ ಹಿತಾಸಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.