ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮರ್ಯಾದಾ ಪುರುಷೋತ್ತಮನ ಮಂದಿರ ನಿರ್ಮಾಣಕ್ಕೆ ಶ್ರಮಿಸಿದ ಭಕ್ತರ ವಿರುದ್ಧ ಕ್ರಮ ಸರಿಯಲ್ಲ. ರಾಮಮಂದಿರ ನಿರ್ಮಾಣಕ್ಕೆ ಅನೇಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ದೇಹದ ಅಂಗಾಂಗ ಕಳೆದುಕೊಂಡಿದ್ದಾರೆ. ಆರ್ಥಿಕ ತೊಂದರೆಗೆ ಒಳಗಾಗಿದ್ದಾರೆ. ಇದು ದೇಶ ದ್ರೋಹದ ಕೆಲಸವಲ್ಲ. ಆರಾಧ್ಯದೇವನ ಮಂದಿರ ನಿರ್ಮಾಣ ನಮ್ಮೆಲ್ಲರ ಹಕ್ಕು’ ಎಂದು ಪ್ರತಿಪಾದಿಸಿದರು.