‘ಬೀದಿ ನಾಯಿಗಳ ಕಡಿತಕ್ಕೆ ಒಳಗಾದ ಸಂತ್ರಸ್ತ ಕುಟುಂಬಕ್ಕೆ ಉಚಿತ ಚಿಕಿತ್ಸೆ ನೀಡಿ, ಪರಿಹಾರ ವಿತರಿಸಲಾಗುವುದು ಹಾಗೂ ಬೀದಿನಾಯಿಗಳ ಹಾವಳಿ ಕಡಿವಾಣಕ್ಕೆ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿ ಶಾಲೆಯ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮ ಕಟ್ಟಡ ನಿರ್ಮಿಸಿರುವ ಬಗ್ಗೆ ಅನೇಕ ಸಂಘಟನೆಗಳು ದೂರು ಕೊಟ್ಟಿವೆ. ಜಿಲ್ಲೆಯ ಯಾವುದೇ ಭಾಗದಲ್ಲಿ ಶಾಲೆ, ರಾಜಕಾಲುವೆಯ ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ನಿರ್ಮಿಸಿದ್ದರೆ ಪರಿಶೀಲಿಸಿ ತಕ್ಷಣ ತೆರವುಗೊಳಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದರು.