ಅಕ್ರಮ ನೀರಾವರಿಯಿಂದಾಗಿ ಕೊನೆಭಾಗಕ್ಕೆ ನೀರು ತಲುಪುತ್ತಿಲ್ಲ ಎಂದು ರೈತ ಸಂಘಟನೆಗಳು ದೂರು ಸಲ್ಲಿಸಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ನೀರು ಕಬಳಿಕೆ ಆಗದಂತೆ ಎಚ್ಚರಿಕೆ ವಹಿಸಿ, ಕೊನೆಭಾಗಕ್ಕೆ ನೀರು ತಲುಪುವಂತೆ ಮಾಡಬೇಕು. ತುಂಗಭದ್ರಾ ಕಾಲುವೆಗಳ 15ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾಸಿರುವಂತೆ, ಟಿಎಲ್ಬಿಸಿಗೆ ನವೆಂಬರ್ 30 ರವರೆಗೂ ನೀರು ಹರಿಸಲಾಗುತ್ತದೆ. 4,100 ಕ್ಯುಸೆಕ್ ನೀರು ಹರಿಸಲು ಸಭೆಯಲ್ಲಿ ನಿರ್ಣಯವಾಗಿದೆ.