<p><strong>ರಾಯಚೂರು:</strong> ವಾಡಿ–ಗದಗ ನೂತನ ರೈಲ್ವೆ ಮಾರ್ಗಕ್ಕಾಗಿ ಲಿಂಗಸುಗೂರು ತಾಲ್ಲೂಕಿನಲ್ಲಿ ಭೂಸ್ವಾಧೀನ ಮಾಡಿಕೊಳ್ಳುತ್ತಿರುವ ಜಮೀನಿಗೆ ಸರ್ಕಾರವು, ಪ್ರತಿ ಎಕರೆಗೆ ₹11 ಲಕ್ಷ ದರ ನಿಗದಿ ಮಾಡಿರುವುದಕ್ಕೆ ಸಂಬಂಧಿಸಿದ ರೈತರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ ಅಧ್ಯಕ್ಷತೆಯಲ್ಲಿ ಭೂ ಸ್ವಾಧೀನ ಜಮೀನಿನ ಭೂ ಬೆಲೆ ನಿರ್ಧಾರಣಾ ಸಲಹಾ ಸಮಿತಿ ಸಭೆ ಆಯೋಜಿಸಲಾಗಿತ್ತು. ಲಿಂಗಸುಗೂರು ತಾಲ್ಲೂಕಿನ ತಲೆಕಟ್ಟ, ಹುನಕುಂಟಿ ಹಾಗೂ ಕಸಬಾ ಲಿಂಗಸುಗೂರು ಗ್ರಾಮಗಳ ರೈತರು ಭಾಗವಹಿಸಿದ್ದರು.</p>.<p>ಈ ಯೋಜನೆಗೆ ಒಟ್ಟು 175 ಎಕರೆ 15 ಗುಂಟೆ ಜಮೀನು ಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಗ್ರಾಮದಲ್ಲಿ ಸದ್ಯ ಪ್ರತಿ ಎಕರೆಗೆ ₹25 ರಿಂದ ₹30 ಲಕ್ಷದವರೆಗೂ ಜಮೀನು ಮಾರಾಟವಾಗುತ್ತಿವೆ. ಆದರೆ, ಸರ್ಕಾರ ನಿಗದಿಪಡಿಸಿದ ದರಕ್ಕೆ ಮಾರಾಟ ಮಾಡುವುದಕ್ಕೆ ಸಾಧ್ಯವಿಲ್ಲ. ಈ ಕೃಷಿ ಜಮೀನು ಅವಲಂಬಿಸಿ ನೂರಾರು ಜನರು ಬದುಕು ಸಾಗಿಸುತ್ತಿದ್ದಾರೆ ಎಂದು ರೈತರು ತಿಳಿಸಿದರು.</p>.<p>ಈ ಭಾಗದಲ್ಲಿ ಜಮೀನುಗಳನ್ನು ನಿವೇಶನಗಳನ್ನಾಗಿ ಪರಿವರ್ತಿಸಿ, ಒಂದು ನಿವೇಶನಕ್ಕೆ ₹20 ಲಕ್ಷ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇಂಥ ಮೌಲ್ಯವಿರುವ ಜಮೀನನ್ನು ಸರ್ಕಾರಕ್ಕೆ ಕೊಡುವುದಿಲ್ಲ. ಸರ್ಕಾರವು ನ್ಯಾಯಬದ್ಧ ದರ ನಿಗದಿಪಡಿಸಬೇಕು. ಇಲ್ಲದಿದ್ದರೆ ರೈತರ ಬದುಕು ಬೀದಿಪಾಲಾಗುತ್ತದೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ ಮಾತನಾಡಿ, ರೈಲ್ವೆ ಮಾರ್ಗಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ರೈತರ ಅಭಿಪ್ರಾಯ ಸಂಗ್ರಹಿಸಲು ಸಭೆ ಕರೆಯಲಾಗಿದೆ. ಸರ್ಕಾರವು ಪ್ರತಿ ಎಕರೆಗೆ ₹11,75,456 ದರ ನಿಗದಿಪಡಿಸಿದೆ. ರೈತರಿಗೆ ಅನ್ಯಾಯವಾಗದಂತೆ ಭೂ ಬೆಲೆ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.</p>.<p>ವಿಶೇಷ ಭೂಸ್ವಾಧೀನ ಅಧಿಕಾರಿ ಅಶೋಕ, ಲಿಂಗಸುಗೂರು ತಹಶೀಲ್ದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ವಾಡಿ–ಗದಗ ನೂತನ ರೈಲ್ವೆ ಮಾರ್ಗಕ್ಕಾಗಿ ಲಿಂಗಸುಗೂರು ತಾಲ್ಲೂಕಿನಲ್ಲಿ ಭೂಸ್ವಾಧೀನ ಮಾಡಿಕೊಳ್ಳುತ್ತಿರುವ ಜಮೀನಿಗೆ ಸರ್ಕಾರವು, ಪ್ರತಿ ಎಕರೆಗೆ ₹11 ಲಕ್ಷ ದರ ನಿಗದಿ ಮಾಡಿರುವುದಕ್ಕೆ ಸಂಬಂಧಿಸಿದ ರೈತರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ ಅಧ್ಯಕ್ಷತೆಯಲ್ಲಿ ಭೂ ಸ್ವಾಧೀನ ಜಮೀನಿನ ಭೂ ಬೆಲೆ ನಿರ್ಧಾರಣಾ ಸಲಹಾ ಸಮಿತಿ ಸಭೆ ಆಯೋಜಿಸಲಾಗಿತ್ತು. ಲಿಂಗಸುಗೂರು ತಾಲ್ಲೂಕಿನ ತಲೆಕಟ್ಟ, ಹುನಕುಂಟಿ ಹಾಗೂ ಕಸಬಾ ಲಿಂಗಸುಗೂರು ಗ್ರಾಮಗಳ ರೈತರು ಭಾಗವಹಿಸಿದ್ದರು.</p>.<p>ಈ ಯೋಜನೆಗೆ ಒಟ್ಟು 175 ಎಕರೆ 15 ಗುಂಟೆ ಜಮೀನು ಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಗ್ರಾಮದಲ್ಲಿ ಸದ್ಯ ಪ್ರತಿ ಎಕರೆಗೆ ₹25 ರಿಂದ ₹30 ಲಕ್ಷದವರೆಗೂ ಜಮೀನು ಮಾರಾಟವಾಗುತ್ತಿವೆ. ಆದರೆ, ಸರ್ಕಾರ ನಿಗದಿಪಡಿಸಿದ ದರಕ್ಕೆ ಮಾರಾಟ ಮಾಡುವುದಕ್ಕೆ ಸಾಧ್ಯವಿಲ್ಲ. ಈ ಕೃಷಿ ಜಮೀನು ಅವಲಂಬಿಸಿ ನೂರಾರು ಜನರು ಬದುಕು ಸಾಗಿಸುತ್ತಿದ್ದಾರೆ ಎಂದು ರೈತರು ತಿಳಿಸಿದರು.</p>.<p>ಈ ಭಾಗದಲ್ಲಿ ಜಮೀನುಗಳನ್ನು ನಿವೇಶನಗಳನ್ನಾಗಿ ಪರಿವರ್ತಿಸಿ, ಒಂದು ನಿವೇಶನಕ್ಕೆ ₹20 ಲಕ್ಷ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇಂಥ ಮೌಲ್ಯವಿರುವ ಜಮೀನನ್ನು ಸರ್ಕಾರಕ್ಕೆ ಕೊಡುವುದಿಲ್ಲ. ಸರ್ಕಾರವು ನ್ಯಾಯಬದ್ಧ ದರ ನಿಗದಿಪಡಿಸಬೇಕು. ಇಲ್ಲದಿದ್ದರೆ ರೈತರ ಬದುಕು ಬೀದಿಪಾಲಾಗುತ್ತದೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ ಮಾತನಾಡಿ, ರೈಲ್ವೆ ಮಾರ್ಗಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ರೈತರ ಅಭಿಪ್ರಾಯ ಸಂಗ್ರಹಿಸಲು ಸಭೆ ಕರೆಯಲಾಗಿದೆ. ಸರ್ಕಾರವು ಪ್ರತಿ ಎಕರೆಗೆ ₹11,75,456 ದರ ನಿಗದಿಪಡಿಸಿದೆ. ರೈತರಿಗೆ ಅನ್ಯಾಯವಾಗದಂತೆ ಭೂ ಬೆಲೆ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.</p>.<p>ವಿಶೇಷ ಭೂಸ್ವಾಧೀನ ಅಧಿಕಾರಿ ಅಶೋಕ, ಲಿಂಗಸುಗೂರು ತಹಶೀಲ್ದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>