ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಜವಾಬ್ದಾರಿ ಚಾಲನೆ: ವಾಹನ ಚಾಲಕರ ಡಿಎಲ್‌ ರದ್ದು ಮಾಡಲು ಎಡಿಜಿಪಿ ನಿರ್ದೇಶನ

Published 26 ಜುಲೈ 2023, 16:52 IST
Last Updated 26 ಜುಲೈ 2023, 16:52 IST
ಅಕ್ಷರ ಗಾತ್ರ

ರಾಯಚೂರು: ನಗರದ ರೈಲ್ವೆ ಸ್ಟೇಷನ್‌ ರಸ್ತೆಯಲ್ಲಿ ಚಾಲಕರ ಬೇಜವಾಬ್ದಾರಿಯಿಂದ ಮೂವರು ವಿದ್ಯಾರ್ಥಿನಿಯರು ಅಪಘಾತದಲ್ಲಿ ಗಾಯಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ಕುಮಾರ ಪ್ರಜಾವಾಣಿ ಆನ್‌ಲೈನ್‌ಲ್ಲಿ ಬುಧವಾರ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಚಾಲಕರ ವಿರುದ್ಧ ಕ್ರಮಕ್ಕೆ ಆದೇಶ ನೀಡಿದ್ದಾರೆ.

ಬೈಕ್‌ ಸವಾರ ಹಾಗೂ ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಬ್ಬರ ವಾಹನ ಚಾಲಕರ ಡ್ರೈವಿಂಗ್‌ ಲೈಸನ್ಸ್‌ ರದ್ದುಪಡಿಸಬೇಕು ಎಂದು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ವಿದ್ಯಾರ್ಥಿನಿಯರಿಗೆ ಗಾಯಗಳಾಗಿರುವುದು ದುರ್ದೈವದ ಸಂಗತಿಯಾಗಿದೆ ಎಂದು ಟ್ಟೀಟ್‌ ಮಾಡಿದ್ದಾರೆ.

ಬೈಕ್‌ ಹಾಗೂ ಕಾರು ಚಾಲಕನ ವಾಹನ ಚಾಲನಾ ಪರವಾನಗಿ ರದ್ದು ಮಾಡಲು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT