<p><strong>ಮಾನ್ವಿ: </strong>‘ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ಮತ್ತು ಜೀವನಮಟ್ಟ ಸುಧಾರಣೆಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದ್ಬಳಕೆ ಅಗತ್ಯ’ ಎಂದು ಪುರಸಭೆಯ ಕಾನೂನು ಸಲಹೆಗಾರ ಎ.ಬಿ.ಉಪ್ಪಳಮಠ ವಕೀಲ ಹೇಳಿದರು.</p>.<p>ಶುಕ್ರವಾರ ಪಟ್ಟಣದ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ದೀನ್ದಯಾಳ್ ಅಂತ್ಯೋದಯ ಹಾಗು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ವ್ಯಾಪಾರ ಸಾಮರ್ಥ್ಯ ಹೆಚ್ಚಳ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬೀದಿ ಬದಿ ವ್ಯಾಪಾರಿಗಳು ಪುರಸಭೆಯ ನಿಯಮಗಳ ಪಾಲನೆಯೊಂದಿಗೆ ವ್ಯಾಪಾರ ಮಾಡಬೇಕು. ಬೀದಿ ಬದಿ ವ್ಯಾಪಾರಿಗಳಿಗೆ ಕಾನೂನಿನಲ್ಲಿಯೂ ರಕ್ಷಣೆ ಸಿಗುತ್ತದೆ. ಬ್ಯಾಂಕ್ಗಳಿಂದ ಹೆಚ್ಚಿನ ಸಾಲ ಸೌಲಭ್ಯ ಬೇಕಾದಲ್ಲಿ ಹಿಂದೆ ಪಡೆದಿರುವ ಸಕಾಲದಲ್ಲಿ ಮರು ಪಾವತಿ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಪುರಸಭೆಯ ವಿರೋಧ ಪಕ್ಷದ ನಾಯಕ ರಾಜಾ ಮಹೇಂದ್ರ ನಾಯಕ ಮಾತನಾಡಿ, ‘ಪಟ್ಟಣದ ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು’ ಎಂದರು.</p>.<p>ಪುರಸಭೆಯ ಅಧ್ಯಕ್ಷೆ ರಶೀದಾ ಬೇಗಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಉಪಾಧ್ಯಕ್ಷ ಕೆ.ಶುಕಮುನಿ, ಸ್ಥಾಯಿ ಸಮಿತಿ ಅಧ್ಯಕ್ಷ ಶೇಖ್ ಫರೀದ್ ಉಮರಿ, ಮುಖ್ಯಾಧಿಕಾರಿ ಜಗದೀಶ ಬಂಢಾರಿ, ಪ್ರಭಾರಿ ನೈರ್ಮಲ್ಯಾಧಿಕಾರಿ ಈರಣ್ಣ ಮಾನ್ವಿ, ಬೀದಿ ಬದಿ ವ್ಯಾಪಾರಿಗಳಾದ ಬಸವರಾಜ, ಆಂಜನೇಯ, ಶ್ರೀನಿವಾಸ ಬೆಳಗಿನಪೇಟೆ, ನಾಗರಾಜ ಹಾಗೂ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: </strong>‘ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ಮತ್ತು ಜೀವನಮಟ್ಟ ಸುಧಾರಣೆಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದ್ಬಳಕೆ ಅಗತ್ಯ’ ಎಂದು ಪುರಸಭೆಯ ಕಾನೂನು ಸಲಹೆಗಾರ ಎ.ಬಿ.ಉಪ್ಪಳಮಠ ವಕೀಲ ಹೇಳಿದರು.</p>.<p>ಶುಕ್ರವಾರ ಪಟ್ಟಣದ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ದೀನ್ದಯಾಳ್ ಅಂತ್ಯೋದಯ ಹಾಗು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ವ್ಯಾಪಾರ ಸಾಮರ್ಥ್ಯ ಹೆಚ್ಚಳ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬೀದಿ ಬದಿ ವ್ಯಾಪಾರಿಗಳು ಪುರಸಭೆಯ ನಿಯಮಗಳ ಪಾಲನೆಯೊಂದಿಗೆ ವ್ಯಾಪಾರ ಮಾಡಬೇಕು. ಬೀದಿ ಬದಿ ವ್ಯಾಪಾರಿಗಳಿಗೆ ಕಾನೂನಿನಲ್ಲಿಯೂ ರಕ್ಷಣೆ ಸಿಗುತ್ತದೆ. ಬ್ಯಾಂಕ್ಗಳಿಂದ ಹೆಚ್ಚಿನ ಸಾಲ ಸೌಲಭ್ಯ ಬೇಕಾದಲ್ಲಿ ಹಿಂದೆ ಪಡೆದಿರುವ ಸಕಾಲದಲ್ಲಿ ಮರು ಪಾವತಿ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಪುರಸಭೆಯ ವಿರೋಧ ಪಕ್ಷದ ನಾಯಕ ರಾಜಾ ಮಹೇಂದ್ರ ನಾಯಕ ಮಾತನಾಡಿ, ‘ಪಟ್ಟಣದ ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು’ ಎಂದರು.</p>.<p>ಪುರಸಭೆಯ ಅಧ್ಯಕ್ಷೆ ರಶೀದಾ ಬೇಗಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಉಪಾಧ್ಯಕ್ಷ ಕೆ.ಶುಕಮುನಿ, ಸ್ಥಾಯಿ ಸಮಿತಿ ಅಧ್ಯಕ್ಷ ಶೇಖ್ ಫರೀದ್ ಉಮರಿ, ಮುಖ್ಯಾಧಿಕಾರಿ ಜಗದೀಶ ಬಂಢಾರಿ, ಪ್ರಭಾರಿ ನೈರ್ಮಲ್ಯಾಧಿಕಾರಿ ಈರಣ್ಣ ಮಾನ್ವಿ, ಬೀದಿ ಬದಿ ವ್ಯಾಪಾರಿಗಳಾದ ಬಸವರಾಜ, ಆಂಜನೇಯ, ಶ್ರೀನಿವಾಸ ಬೆಳಗಿನಪೇಟೆ, ನಾಗರಾಜ ಹಾಗೂ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>