<p><strong>ರಾಯಚೂರು:</strong> ‘ಮಕ್ಕಳು ಶಿಕ್ಷಣ ಪಡೆಯುವ ಮೂಲಕ ಜಾಗೃತರಾಗಬೇಕು. ಕಾನೂನು ಅರಿವು ಹೊಂದುವ ಮೂಲಕ ಶೋಷಣೆಗೆ ಒಳಗಾಗುವುದನ್ನು ತಪ್ಪಿಸಿಕೊಳ್ಳಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ದಯಾನಂದ ಬೇಲೂರೆ ಹೇಳಿದರು.</p>.<p>ನಗರದ ಆಶಾಪುರ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಮಾನವ ಕಳ್ಳ ಸಾಗಣೆ ತಡೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು</p>.<p>‘ಮಾನವ ಕಳ್ಳ ಸಾಗಣೆ ಕಂಡು ಬಂದರೆ ತಕ್ಷಣ ಪೊಲೀಸ್ ಸಹಾಯವಾಣಿ 112 ಅಥವಾ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು’ಎಂದು ತಿಳಿಸಿದರು.</p>.<p>ರೈಲ್ವೆ ಪೊಲೀಸ್ ಅಧಿಕಾರಿ ಅಭಿಷೇಕಕುಮಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್.ಜಿ, ಉಡಮಗಲ್ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ದುಂಡಪ್ಪ ಬಿರಾದಾರ ಮಾತನಾಡಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯೆ ಕಲ್ಪನಾ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.</p>.<p>ರೈಲ್ವೆ ಪೊಲೀಸ್ನ ಸಿ.ನರಸಿಂಹ ಮೂರ್ತಿ, ವೆಂಕಟೇಶ ವೈ.ಎನ್, ಹುಲಿಗೆಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹನುಮೇಶ, ಕಿರಲಿಂಗಪ್ಪ, ಶಿವರಾಜ, ಖಾಜಾಬಿ, ರಮೇಶ, ವಿಶಾಲಕ್ಷ್ಮಿ ನರಸಿಂಹ ಜಿ.ಬಿ., ಈರಮ್ಮ ಹಾಗೂ ದಿನೇಶಕಕುಮಾರ ಇದ್ದರು.</p>.<p>ಶಿವರಾಜ ಸ್ವಾಗತಿಸಿದರು. ತಿಕ್ಕಯ್ಯ ನಿರೂಪಿಸಿದರು. ಹನುಮೇಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಮಕ್ಕಳು ಶಿಕ್ಷಣ ಪಡೆಯುವ ಮೂಲಕ ಜಾಗೃತರಾಗಬೇಕು. ಕಾನೂನು ಅರಿವು ಹೊಂದುವ ಮೂಲಕ ಶೋಷಣೆಗೆ ಒಳಗಾಗುವುದನ್ನು ತಪ್ಪಿಸಿಕೊಳ್ಳಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ದಯಾನಂದ ಬೇಲೂರೆ ಹೇಳಿದರು.</p>.<p>ನಗರದ ಆಶಾಪುರ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಮಾನವ ಕಳ್ಳ ಸಾಗಣೆ ತಡೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು</p>.<p>‘ಮಾನವ ಕಳ್ಳ ಸಾಗಣೆ ಕಂಡು ಬಂದರೆ ತಕ್ಷಣ ಪೊಲೀಸ್ ಸಹಾಯವಾಣಿ 112 ಅಥವಾ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು’ಎಂದು ತಿಳಿಸಿದರು.</p>.<p>ರೈಲ್ವೆ ಪೊಲೀಸ್ ಅಧಿಕಾರಿ ಅಭಿಷೇಕಕುಮಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್.ಜಿ, ಉಡಮಗಲ್ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ದುಂಡಪ್ಪ ಬಿರಾದಾರ ಮಾತನಾಡಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯೆ ಕಲ್ಪನಾ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.</p>.<p>ರೈಲ್ವೆ ಪೊಲೀಸ್ನ ಸಿ.ನರಸಿಂಹ ಮೂರ್ತಿ, ವೆಂಕಟೇಶ ವೈ.ಎನ್, ಹುಲಿಗೆಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹನುಮೇಶ, ಕಿರಲಿಂಗಪ್ಪ, ಶಿವರಾಜ, ಖಾಜಾಬಿ, ರಮೇಶ, ವಿಶಾಲಕ್ಷ್ಮಿ ನರಸಿಂಹ ಜಿ.ಬಿ., ಈರಮ್ಮ ಹಾಗೂ ದಿನೇಶಕಕುಮಾರ ಇದ್ದರು.</p>.<p>ಶಿವರಾಜ ಸ್ವಾಗತಿಸಿದರು. ತಿಕ್ಕಯ್ಯ ನಿರೂಪಿಸಿದರು. ಹನುಮೇಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>