<p><strong>ರಾಯಚೂರು:</strong> ಜಿ+3 ಮಾದರಿಯಲ್ಲಿ ಅನುಮೋನೆಗೊಂಡು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎಎಚ್ಪಿ ಯೋಜನೆಯಡಿ ರಾಯಚೂರು ಮಹಾನಗರ ಪಾಲಿಕೆಗೆ 54ನೇ ಸಿಎಸ್ಎಂಸಿಯಲ್ಲಿ ಯರಮರಸ್ ಬಳಿ ನಿರ್ಮಾಣ ಹಂತದಲ್ಲಿರುವ ಜಿ+3 ಮಾದರಿಯ 2419 ವಸತಿ ಸಮುಚ್ಛಯದ ಸ್ಥಳಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕಟ್ಟಡ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ ಬಡವರಿಗೆ ವಿತರಿಸಲು ಕ್ರಮವಹಿಸಬೇಕು’ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಜಿ+3 ಸಮುಚ್ಛಯ ನಿರ್ಮಾಣ ಕಾರ್ಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ನಡೆಯುತ್ತಿದೆ. ಬಡವರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಈ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ. ದಾಖಲೆಯ 2419 ಮನೆಗಳನ್ನು ನಿರ್ಮಿಸಿ ಕಡುಬಡವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ಹಾಗೂ ಹಿಂದುಳಿದ ವರ್ಗದ ಜನತೆಗೆ ನೀಡುತ್ತಿರುವುದು ರಾಯಚೂರ ಇತಿಹಾಸದಲ್ಲಿ ದಾಖಲಾರ್ಹ ಕಾರ್ಯವಾಗಿದೆ’ ಎಂದು ತಿಳಿಸಿದರು.</p>.<p><strong>ಹೆಚ್ಚುವರಿ ಅನುದಾನದ ಭರವಸೆ:</strong> ಯರಮರಸ್ ವಿಮಾನ ನಿಲ್ದಾಣದ ಸಮೀಪ ನಿರ್ಮಾಣವಾಗುತ್ತಿರುವ ಜಿ+3 ವಸತಿ ಸಮುಚ್ಚಯಕ್ಕೆ ಬೇಕಿರುವ ರಸ್ತೆ ಸಂಪರ್ಕ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಾರ್ಯಕ್ಕೆ ಬೇಕಾಗಿರುವ ಹೆಚ್ಚುವರಿ ಅನುದಾನವನ್ನು ನಗರಾಭಿವೃದ್ಧಿ ಇಲಾಖೆಯಿಂದ ಕೊಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.</p>.<p>‘ಜಿ+3 ಮನೆಗಳನ್ನು 44 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿದೆ. ಪರಿಶಿಷ್ಟ ಜಾತಿಗೆ 951 ಮನೆಗಳು, ಪರಿಶಿಷ್ಟ ಪಂಗಡಕ್ಕೆ 1053 ಮನೆಗಳು, ಸಾಮಾನ್ಯ ವರ್ಗಕ್ಕೆ 228 ಮನೆಗಳು ಮತ್ತು ಹಿಂದುಳಿದ ವರ್ಗಕ್ಕೆ 187 ಮನೆಗಳು ಅನುಮೋದನೆಯಾಗಿವೆ. ಈ ಯೋಜನೆಯ ಅಂದಾಜು ವೆಚ್ಚ ₹ 9 ಲಕ್ಷ ಇರುತ್ತದೆ. ಎಸ್ ಎಸಿ ಮತ್ತು ಎಸ್ ಟಿ ಅವರಿಗೆ ಕೇಂದ್ರ ಮತ್ತು ರಾಜ್ಯದಿಂದ ಸಬ್ಸಿಡಿ ಅನುದಾನ ರಾಜ್ಯ ಸರ್ಕಾರದ ₹2 ಲಕ್ಷ ಹಾಗೂ ಕೇಂದ್ರ ಸರ್ಕಾರದ ₹1.5 ಲಕ್ಷ ರೂ ಅನುದಾನ ಸೇರಿ ಒಟ್ಟು ₹3.50 ಲಕ್ಷ ನಿಗದಿಪಡಿಸಲಾಗಿದೆ‘ ಎಂದು ತಿಳಿಸಿದರು.</p>.<p>‘ಬ್ಯಾಂಕಿನಿಂದ ಲೋನ್ ಪಡೆದು ಬಾಕಿ ಉಳಿದ ಅನುದಾನವನ್ನು ಫಲಾನುಭವಿಗಳೇ ಭರಿಸಬೇಕಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ ಸಚಿವರಿಗೆ ಮಾಹಿತಿ ನೀಡಿದರು.</p>.<p>ಮಸ್ಕಿ ಶಾಸಕ ಬಸನಗೌಡ ತುರವಿಹಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಏಗನೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿ+3 ಮಾದರಿಯಲ್ಲಿ ಅನುಮೋನೆಗೊಂಡು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎಎಚ್ಪಿ ಯೋಜನೆಯಡಿ ರಾಯಚೂರು ಮಹಾನಗರ ಪಾಲಿಕೆಗೆ 54ನೇ ಸಿಎಸ್ಎಂಸಿಯಲ್ಲಿ ಯರಮರಸ್ ಬಳಿ ನಿರ್ಮಾಣ ಹಂತದಲ್ಲಿರುವ ಜಿ+3 ಮಾದರಿಯ 2419 ವಸತಿ ಸಮುಚ್ಛಯದ ಸ್ಥಳಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕಟ್ಟಡ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ ಬಡವರಿಗೆ ವಿತರಿಸಲು ಕ್ರಮವಹಿಸಬೇಕು’ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಜಿ+3 ಸಮುಚ್ಛಯ ನಿರ್ಮಾಣ ಕಾರ್ಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ನಡೆಯುತ್ತಿದೆ. ಬಡವರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಈ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ. ದಾಖಲೆಯ 2419 ಮನೆಗಳನ್ನು ನಿರ್ಮಿಸಿ ಕಡುಬಡವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ಹಾಗೂ ಹಿಂದುಳಿದ ವರ್ಗದ ಜನತೆಗೆ ನೀಡುತ್ತಿರುವುದು ರಾಯಚೂರ ಇತಿಹಾಸದಲ್ಲಿ ದಾಖಲಾರ್ಹ ಕಾರ್ಯವಾಗಿದೆ’ ಎಂದು ತಿಳಿಸಿದರು.</p>.<p><strong>ಹೆಚ್ಚುವರಿ ಅನುದಾನದ ಭರವಸೆ:</strong> ಯರಮರಸ್ ವಿಮಾನ ನಿಲ್ದಾಣದ ಸಮೀಪ ನಿರ್ಮಾಣವಾಗುತ್ತಿರುವ ಜಿ+3 ವಸತಿ ಸಮುಚ್ಚಯಕ್ಕೆ ಬೇಕಿರುವ ರಸ್ತೆ ಸಂಪರ್ಕ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಾರ್ಯಕ್ಕೆ ಬೇಕಾಗಿರುವ ಹೆಚ್ಚುವರಿ ಅನುದಾನವನ್ನು ನಗರಾಭಿವೃದ್ಧಿ ಇಲಾಖೆಯಿಂದ ಕೊಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.</p>.<p>‘ಜಿ+3 ಮನೆಗಳನ್ನು 44 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿದೆ. ಪರಿಶಿಷ್ಟ ಜಾತಿಗೆ 951 ಮನೆಗಳು, ಪರಿಶಿಷ್ಟ ಪಂಗಡಕ್ಕೆ 1053 ಮನೆಗಳು, ಸಾಮಾನ್ಯ ವರ್ಗಕ್ಕೆ 228 ಮನೆಗಳು ಮತ್ತು ಹಿಂದುಳಿದ ವರ್ಗಕ್ಕೆ 187 ಮನೆಗಳು ಅನುಮೋದನೆಯಾಗಿವೆ. ಈ ಯೋಜನೆಯ ಅಂದಾಜು ವೆಚ್ಚ ₹ 9 ಲಕ್ಷ ಇರುತ್ತದೆ. ಎಸ್ ಎಸಿ ಮತ್ತು ಎಸ್ ಟಿ ಅವರಿಗೆ ಕೇಂದ್ರ ಮತ್ತು ರಾಜ್ಯದಿಂದ ಸಬ್ಸಿಡಿ ಅನುದಾನ ರಾಜ್ಯ ಸರ್ಕಾರದ ₹2 ಲಕ್ಷ ಹಾಗೂ ಕೇಂದ್ರ ಸರ್ಕಾರದ ₹1.5 ಲಕ್ಷ ರೂ ಅನುದಾನ ಸೇರಿ ಒಟ್ಟು ₹3.50 ಲಕ್ಷ ನಿಗದಿಪಡಿಸಲಾಗಿದೆ‘ ಎಂದು ತಿಳಿಸಿದರು.</p>.<p>‘ಬ್ಯಾಂಕಿನಿಂದ ಲೋನ್ ಪಡೆದು ಬಾಕಿ ಉಳಿದ ಅನುದಾನವನ್ನು ಫಲಾನುಭವಿಗಳೇ ಭರಿಸಬೇಕಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ ಸಚಿವರಿಗೆ ಮಾಹಿತಿ ನೀಡಿದರು.</p>.<p>ಮಸ್ಕಿ ಶಾಸಕ ಬಸನಗೌಡ ತುರವಿಹಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಏಗನೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>