<p><strong>ರಾಯಚೂರು</strong>: ಅಗ್ನಿಪಥ ಸೇನಾ ಭರ್ತಿ ರ್ಯಾಲಿಯ ಎರಡನೇ ದಿನವಾದ ಶನಿವಾರ ಕಲ್ಯಾಣ ಕರ್ನಾಟಕದ ನಾಲ್ಕು ಜಿಲ್ಲೆಗಳ 860 ಅಭ್ಯರ್ಥಿಗಳು ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗೆ ಹಾಜರಾದರು.</p><p>ಕೊಪ್ಪಳ ಜಿಲ್ಲೆಯ 83 ಅಭ್ಯರ್ಥಿಗಳು, ಯಾದಗಿರಿ ಜಿಲ್ಲೆಯ 251 ಅಭ್ಯರ್ಥಿಗಳು, ಕಲಬುರಗಿ ಜಿಲ್ಲೆಯ 445 ಮತ್ತು ಬೀದರ್ ಜಿಲ್ಲೆಯ 81 ಅಭ್ಯರ್ಥಿಗಳು ಸೇರಿ ಒಟ್ಟು 860 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾದರು.</p><p>ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ ಆರು ಜಿಲ್ಲೆಗಳ 860 ಅಭ್ಯರ್ಥಿಗಳು ಬೆಳಿಗ್ಗೆ 5 ಗಂಟೆಯಿಂದ 9.30ರ ವರೆಗೆ ಏಳು ಗುಂಪುಗಳಲ್ಲಿ ತಲಾ 4 ಸುತ್ತಿನ 1,600 ಮೀಟರ್ ಓಟ ಮುಕ್ತಾಯಗೊಳಿಸಿದರು.<br>ಬಳಿಕ ಅಭ್ಯರ್ಥಿಗಳಿಗೆ ಅಲ್ಪ ವಿರಾಮ ನೀಡಲಾಯಿತು. ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.</p><p>ಆಗಸ್ಟ್ 9ರಂದು ನೋಂದಣಿ ಮಾಡಿದ ಅಭ್ಯರ್ಥಿಗಳಲ್ಲಿ 735 ಅಭ್ಯರ್ಥಿಗಳು ಓಟದಲ್ಲಿ ಭಾಗವಹಿಸಿದರು. ಈ ಪೈಕಿ 379 ಅಭ್ಯರ್ಥಿಗಳು ಓಟದ ಪರೀಕ್ಷೆಯಲ್ಲಿ ತೇರ್ಗಡೆಯಾದರು.</p><p>ಓಟದ ಸುತ್ತಿನಲ್ಲಿ ಪಾಸಾದ ಅಭ್ಯರ್ಥಿಗಳು ಎರಡನೇ ಸುತ್ತಿನಲ್ಲಿ ಜಿಗ್ಜಾಗ್, ಪುಲ್ಅಪ್, ಉದ್ದ ಜಿಗಿತ ಪರೀಕ್ಷೆಗೆ ಹಾಜರರಾದರು. ಇನ್ನೂ ಎತ್ತರ, ಎದೆ ಸುತ್ತಳತೆ, ನೇತ್ರ ಪರೀಕ್ಷೆಗೆ ಹಾಜರಾಗಲಿದ್ದಾರೆ.</p><p>ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದವರು ರಾಯಚೂರು ರೈಲು ನಿಲ್ದಾಣದಲ್ಲಿ ರೈಲು ಮೂಲಕ ಸೇನಾ ಭರ್ತಿಗೆ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಅಗ್ನಿಪಥ ಸೇನಾ ಭರ್ತಿ ರ್ಯಾಲಿಯ ಎರಡನೇ ದಿನವಾದ ಶನಿವಾರ ಕಲ್ಯಾಣ ಕರ್ನಾಟಕದ ನಾಲ್ಕು ಜಿಲ್ಲೆಗಳ 860 ಅಭ್ಯರ್ಥಿಗಳು ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗೆ ಹಾಜರಾದರು.</p><p>ಕೊಪ್ಪಳ ಜಿಲ್ಲೆಯ 83 ಅಭ್ಯರ್ಥಿಗಳು, ಯಾದಗಿರಿ ಜಿಲ್ಲೆಯ 251 ಅಭ್ಯರ್ಥಿಗಳು, ಕಲಬುರಗಿ ಜಿಲ್ಲೆಯ 445 ಮತ್ತು ಬೀದರ್ ಜಿಲ್ಲೆಯ 81 ಅಭ್ಯರ್ಥಿಗಳು ಸೇರಿ ಒಟ್ಟು 860 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾದರು.</p><p>ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ ಆರು ಜಿಲ್ಲೆಗಳ 860 ಅಭ್ಯರ್ಥಿಗಳು ಬೆಳಿಗ್ಗೆ 5 ಗಂಟೆಯಿಂದ 9.30ರ ವರೆಗೆ ಏಳು ಗುಂಪುಗಳಲ್ಲಿ ತಲಾ 4 ಸುತ್ತಿನ 1,600 ಮೀಟರ್ ಓಟ ಮುಕ್ತಾಯಗೊಳಿಸಿದರು.<br>ಬಳಿಕ ಅಭ್ಯರ್ಥಿಗಳಿಗೆ ಅಲ್ಪ ವಿರಾಮ ನೀಡಲಾಯಿತು. ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.</p><p>ಆಗಸ್ಟ್ 9ರಂದು ನೋಂದಣಿ ಮಾಡಿದ ಅಭ್ಯರ್ಥಿಗಳಲ್ಲಿ 735 ಅಭ್ಯರ್ಥಿಗಳು ಓಟದಲ್ಲಿ ಭಾಗವಹಿಸಿದರು. ಈ ಪೈಕಿ 379 ಅಭ್ಯರ್ಥಿಗಳು ಓಟದ ಪರೀಕ್ಷೆಯಲ್ಲಿ ತೇರ್ಗಡೆಯಾದರು.</p><p>ಓಟದ ಸುತ್ತಿನಲ್ಲಿ ಪಾಸಾದ ಅಭ್ಯರ್ಥಿಗಳು ಎರಡನೇ ಸುತ್ತಿನಲ್ಲಿ ಜಿಗ್ಜಾಗ್, ಪುಲ್ಅಪ್, ಉದ್ದ ಜಿಗಿತ ಪರೀಕ್ಷೆಗೆ ಹಾಜರರಾದರು. ಇನ್ನೂ ಎತ್ತರ, ಎದೆ ಸುತ್ತಳತೆ, ನೇತ್ರ ಪರೀಕ್ಷೆಗೆ ಹಾಜರಾಗಲಿದ್ದಾರೆ.</p><p>ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದವರು ರಾಯಚೂರು ರೈಲು ನಿಲ್ದಾಣದಲ್ಲಿ ರೈಲು ಮೂಲಕ ಸೇನಾ ಭರ್ತಿಗೆ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>