ರಾಯಚೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಕ ಬೆಳೆ ಹಾಗೂ ವರ್ಷದಿಂದ ವರ್ಷಕ್ಕೆ ಸರದಿ ಬೆಳೆಯಾಗಿ ಭತ್ತ,ಹತ್ತಿ ,ಮೆಣಸಿನಕಾಯಿ ಬೆಳೆಯಲಾಗುತ್ತಿದೆ. ಮಳೆ ಅಭಾವದಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಕಾಲುವೆ ನೀರಿನ ಅಭಾವ ಕಂಡು ಬರುತ್ತಿದೆ. ರೈತರು, ತೊಗರಿ, ಜೋಳ ಮತ್ತು ಕಡಲೆ ಬೆಳೆಗಳನ್ನು ಬೆಳೆಯಲು ಶಿಫಾರಸು ಮಾಡಲಾಗಿದೆ. ಕಡಲೆ ಬೆಳೆಯ ಬಿಜಿಡಿ-103 ತಳಿಯನ್ನು ಆಯ್ಕೆ ಮಾಡಿ ಆಯ್ದ ರೈತರ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿತ್ತು. ಇದರ ವಿಶೇಷತೆ ಕುರಿತು ಅರಿವು ಮೂಡಿಸಲು ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.