ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

14 ರಿಂದ ರಾಯಚೂರಿನಲ್ಲಿ ಕೃಷಿ ಮೇಳ

Last Updated 12 ಡಿಸೆಂಬರ್ 2019, 10:42 IST
ಅಕ್ಷರ ಗಾತ್ರ

ರಾಯಚೂರು: ಡಿಸೆಂಬರ್‌ 14 ರಿಂದ ಮೂರು ದಿನಗಳವರೆಗೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿ ಮೇಳ ಆಯೋಜಿಸಲಾಗುವುದು ಎಂದು ಕುಲಪತಿ ಡಾ.ಕೆ.ಎನ್‌. ಕಟ್ಟಿಮನಿ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ‘ನೆಲ ಜಲ ಉಳಿಸಿ, ಆದಾಯ ಹೆಚ್ಚಿಸಿ’ ಎಂಬ ಘೋಷಣೆಯಡಿ ಮೇಳ ಆಯೋಜನೆ ಮಾಡಲಾಗುತ್ತಿದೆ. ನೆರೆ ಹಾಗೂ ಬರ ಎರಡೂ ಸಂದರ್ಭಗಳಲ್ಲಿ ರೈತರು ಸುಸ್ಥಿರವಾಗಿ ಕೃಷಿ ಮಾಡುವ ಕುರಿತು ಪ್ರಾತ್ಯಕ್ಷಿಕೆ, ಮಾದರಿಗಳ ಪ್ರದರ್ಶನದೊಂದಿಗೆ ಮನವರಿಕೆ ಮಾಡಲಾಗುವುದು.

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತರು ನಷ್ಟ ಅನುಭವಿಸಿಲ್ಲ. ಕೃಷಿಯೊಂದಿಗೆ ಹೈನುಗಾರಿಕೆ, ಕೋಳಿಸಾಕಾಣಿಕೆ, ತೋಟಗಾರಿಕೆ ಮಾಡುವುದು ತುಂಬಾ ಮುಖ್ಯ. ಒಂದೇ ಬೆಳೆಯನ್ನು ಬೆಳೆಯುವುದರಿಂದ ಹವಾಮಾನ ವೈಪರೀತ್ಯಕ್ಕೀಡಾಗಿ ಸಂಕಷ್ಟ ಅನುಭವಿಸುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಕೃಷಿ ಮೇಳದ ಮೂಲಕ ಮಾಹಿತಿ ನೀಡಲಾಗುವುದು ಎಂದರು.

ನೆಲ, ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ರೈತರಿಗೆ ಸಹಾಯಕವಾಗುವ ಕೃಷಿ ಸಾಧನಗಳು, ಔಷಧಿಗಳು ಹಾಗೂ ಬೀಜಗಳನ್ನು ಮಾರಾಟ ಮಾಡುವ ಕಂಪೆನಿಗಳು ಕೂಡಾ ಮೇಳದಲ್ಲಿ ಭಾಗವಹಿಸುತ್ತಿವೆ. ಮುಖ್ಯವಾಗಿ ಸಾಧಕ ರೈತರೊಂದಿಗೆ ಸಂವಾದ ನಡೆಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT