<p><strong>ರಾಯಚೂರು:</strong> ‘ವಿದ್ಯಾರ್ಥಿಗಳು ಸವಾಲುಗಳು ಹಾಗೂ ಅವುಗಳಿಂದ ಬರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಗುರಿ ಸಾಧಿಸಬೇಕು’ ಎಂದು ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು ಸಲಹೆ ನೀಡಿದರು.</p>.<p>ನಗರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಜೀವನದಲ್ಲಿ ತೊಂದರೆಗಳು ಸಹಜ. ಆದರೆ, ಅವುಗಳಿಗೆ ಪರಿಹಾರ ಹುಡುಕುವುದು ಅಸಾಧ್ಯವೇನಲ್ಲ. ಇದನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಸಮರ್ಪಣಾ ಮನೋಭಾವ, ಶಿಸ್ತು ಹಾಗೂ ಭಕ್ತಿಪೂರ್ವಕ ಮನಸ್ಸಿನಿಂದ ಶ್ರಮಪಟ್ಟರೆ ಯಶಸ್ಸು ಕಟ್ಟಿಟ್ಟ ಬುತ್ತಿ’ ಎಂದರು.</p>.<p>‘ಈ ಭೂಮಿ ಮೇಲೆ ಮಾನವನ ವಸಾಹತು ಇರುವವರೆಗೂ ಕೃಷಿ ಕ್ಷೇತ್ರವು ಇದ್ದೇ ಇರುತ್ತದೆ. ಹೀಗಾಗಿ ಕೃಷಿ ಮತ್ತು ಕೃಷಿ ತಾಂತ್ರಿಕ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅದೃಷ್ಟವಂತರು. ಈ ಕೃಷಿ ಕ್ಷೇತ್ರ ಮತ್ತು ಸಮಾಜ ಅವುಗಳ ಬೆಳವಣಿಗೆಗೆ ನಿಮ್ಮ ಕೊಡುಗೆಯನ್ನು ಬಯಸುತ್ತಿವೆ. ಆದ್ದರಿಂದ ಕೃಷಿ ಜ್ಞಾನ, ಕೃಷಿ ಕೌಶಲ ಹಾಗೂ ಸೇವಾ ಮನೋಭಾವ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಎಂ.ಹನುಮಂತಪ್ಪ ಮಾತನಾಡಿ,‘ಈ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ಅನೇಕ ವಿದ್ಯಾರ್ಥಿಗಳು ದೇಶ ಹಾಗೂ ರಾಜ್ಯದ ಅನೇಕ ಸಂಸ್ಥೆ ಹಾಗೂ ಸರ್ಕಾರಗಳಲ್ಲಿ ಉನ್ನತ ಹುದ್ದೆಯಲ್ಲಿದ್ದು, ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ’ ಎಂದರು.</p>.<p>‘ರೈತರ ವಿಶ್ವವಿದ್ಯಾಲಯವಾದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ರೈತರ ಏಳಿಗೆಗೆ ಇದುವರೆಗೆ 55 ಹೊಸ ತಳಿಗಳು, 500 ತಂತ್ರಜ್ಞಾನಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ವಿಶ್ವವಿದ್ಯಾಲಯವು ಆವಿಷ್ಕರಿಸಿದ ಇ-ಸ್ಯಾಪ್ ತಂತ್ರಜ್ಞಾನ ಕರ್ನಾಟಕ ರಾಜ್ಯ ಹಾಗೂ ಇತರೆ ರಾಜ್ಯಗಳಿಗೆ ಪಸರಿಸಿರುವುದು ಹೆಮ್ಮೆಯ ಸಂಗತಿ. ಜೊತೆಗೆ ಈ ವರ್ಷದಲ್ಲಿ ವಿಶ್ವವಿದ್ಯಾಲಯ ಸಂಶೋಧಿಸಿದ 4 ತಂತ್ರಜ್ಞಾಗಳಿಗೆ ಪೇಟೆಂಟ್ ದೊರೆತಿದೆ’ ಎಂದು ತಿಳಿಸಿದರು.</p>.<p>‘ನಮ್ಮ ವಿಶ್ವವಿದ್ಯಾಲಯದ ವಿಜ್ಞಾನಿಗಳು ಮತ್ತು ಶಿಕ್ಷಕರು ಇನ್ನೂ ಹೆಚ್ಚಿನ ಪರಿಶ್ರಮವಹಿಸಿ ಅನೇಕ ರೈತಸ್ನೇಹಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಬೇಕಿದೆ’ ಎಂದರು.</p>.<p>ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಮಲ್ಲಿಕಾರ್ಜುನ ಡಿ. ಮಾತನಾಡಿ, ‘ವಿಶ್ವವಿದ್ಯಾಲಯದಲ್ಲಿ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಅವುಗಳಲ್ಲಿ ಶೇ 20ರಷ್ಟು ಮಾತ್ರ ರೈತರಿಗೆ ತಲುಪುತ್ತಿವೆ. ಆದ್ದರಿಂದ ವಿಶ್ವವಿದ್ಯಾಲಯವು ರೈತರಲ್ಲಿನ ತಂತ್ರಜ್ಞಾನ ಅಳವಡಿಕೆಯ ಕುರಿತು ಅಧ್ಯಯನವನ್ನು ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಮಸ್ಕಿ ತಾಲ್ಲೂಕಿನ ಗುಡಿಹಾಳ ಗ್ರಾಮದ ಶಿವಕುಮಾರ ಪಾಟೀಲ ಅವರು ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ರಾಯಚೂರು ಕೃಷಿ ವಿಜ್ಞಾನ ಕೇಂದ್ರ ಪ್ರಾಯೋಜಿತ ‘2025ರ ಕೃಷಿರತ್ನ’ ಪ್ರಶಸ್ತಿ ಹಾಗೂ ಚಿನ್ನದ ಪದಕ ಬಹುಮಾನ ನೀಡಿ ಗೌರವಿಸಲಾಯಿತು.</p>.<p>ವಿಶ್ವವಿದ್ಯಾಲಯದ ಅತ್ಯುತ್ತಮ ಶಿಕ್ಷಕ, ಸಂಶೋಧನಾ ವಿಜ್ಞಾನಿ, ವಿಸ್ತರಣಾ ವಿಜ್ಞಾನಿ, ಕ್ಷೇತ್ರ ಅಧೀಕ್ಷಕ, ಸೇವಾ ಸಿಬ್ಬಂದಿ, ಕ್ಷೇತ್ರ ಸಹಾಯಕ ಹಾಗೂ ಅತ್ಯುತ್ತಮ ಕೃಷಿ ಕಾರ್ಮಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.</p>.<p>ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಬಿ.ವಿ.ಪಾಟೀಲ, ನಿವೃತ್ತ ಡೀನ್ ಸಿ.ವಿ.ಪಾಟೀಲ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಮಲ್ಲೇಶ ಕೊಲಿಮಿ, ವಿಶ್ವವಿದ್ಯಾಲಯದ ಅಧಿಕಾರಿಗಳು, ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ವಿದ್ಯಾರ್ಥಿಗಳು ಸವಾಲುಗಳು ಹಾಗೂ ಅವುಗಳಿಂದ ಬರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಗುರಿ ಸಾಧಿಸಬೇಕು’ ಎಂದು ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು ಸಲಹೆ ನೀಡಿದರು.</p>.<p>ನಗರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಜೀವನದಲ್ಲಿ ತೊಂದರೆಗಳು ಸಹಜ. ಆದರೆ, ಅವುಗಳಿಗೆ ಪರಿಹಾರ ಹುಡುಕುವುದು ಅಸಾಧ್ಯವೇನಲ್ಲ. ಇದನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಸಮರ್ಪಣಾ ಮನೋಭಾವ, ಶಿಸ್ತು ಹಾಗೂ ಭಕ್ತಿಪೂರ್ವಕ ಮನಸ್ಸಿನಿಂದ ಶ್ರಮಪಟ್ಟರೆ ಯಶಸ್ಸು ಕಟ್ಟಿಟ್ಟ ಬುತ್ತಿ’ ಎಂದರು.</p>.<p>‘ಈ ಭೂಮಿ ಮೇಲೆ ಮಾನವನ ವಸಾಹತು ಇರುವವರೆಗೂ ಕೃಷಿ ಕ್ಷೇತ್ರವು ಇದ್ದೇ ಇರುತ್ತದೆ. ಹೀಗಾಗಿ ಕೃಷಿ ಮತ್ತು ಕೃಷಿ ತಾಂತ್ರಿಕ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅದೃಷ್ಟವಂತರು. ಈ ಕೃಷಿ ಕ್ಷೇತ್ರ ಮತ್ತು ಸಮಾಜ ಅವುಗಳ ಬೆಳವಣಿಗೆಗೆ ನಿಮ್ಮ ಕೊಡುಗೆಯನ್ನು ಬಯಸುತ್ತಿವೆ. ಆದ್ದರಿಂದ ಕೃಷಿ ಜ್ಞಾನ, ಕೃಷಿ ಕೌಶಲ ಹಾಗೂ ಸೇವಾ ಮನೋಭಾವ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಎಂ.ಹನುಮಂತಪ್ಪ ಮಾತನಾಡಿ,‘ಈ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ಅನೇಕ ವಿದ್ಯಾರ್ಥಿಗಳು ದೇಶ ಹಾಗೂ ರಾಜ್ಯದ ಅನೇಕ ಸಂಸ್ಥೆ ಹಾಗೂ ಸರ್ಕಾರಗಳಲ್ಲಿ ಉನ್ನತ ಹುದ್ದೆಯಲ್ಲಿದ್ದು, ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ’ ಎಂದರು.</p>.<p>‘ರೈತರ ವಿಶ್ವವಿದ್ಯಾಲಯವಾದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ರೈತರ ಏಳಿಗೆಗೆ ಇದುವರೆಗೆ 55 ಹೊಸ ತಳಿಗಳು, 500 ತಂತ್ರಜ್ಞಾನಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ವಿಶ್ವವಿದ್ಯಾಲಯವು ಆವಿಷ್ಕರಿಸಿದ ಇ-ಸ್ಯಾಪ್ ತಂತ್ರಜ್ಞಾನ ಕರ್ನಾಟಕ ರಾಜ್ಯ ಹಾಗೂ ಇತರೆ ರಾಜ್ಯಗಳಿಗೆ ಪಸರಿಸಿರುವುದು ಹೆಮ್ಮೆಯ ಸಂಗತಿ. ಜೊತೆಗೆ ಈ ವರ್ಷದಲ್ಲಿ ವಿಶ್ವವಿದ್ಯಾಲಯ ಸಂಶೋಧಿಸಿದ 4 ತಂತ್ರಜ್ಞಾಗಳಿಗೆ ಪೇಟೆಂಟ್ ದೊರೆತಿದೆ’ ಎಂದು ತಿಳಿಸಿದರು.</p>.<p>‘ನಮ್ಮ ವಿಶ್ವವಿದ್ಯಾಲಯದ ವಿಜ್ಞಾನಿಗಳು ಮತ್ತು ಶಿಕ್ಷಕರು ಇನ್ನೂ ಹೆಚ್ಚಿನ ಪರಿಶ್ರಮವಹಿಸಿ ಅನೇಕ ರೈತಸ್ನೇಹಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಬೇಕಿದೆ’ ಎಂದರು.</p>.<p>ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಮಲ್ಲಿಕಾರ್ಜುನ ಡಿ. ಮಾತನಾಡಿ, ‘ವಿಶ್ವವಿದ್ಯಾಲಯದಲ್ಲಿ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಅವುಗಳಲ್ಲಿ ಶೇ 20ರಷ್ಟು ಮಾತ್ರ ರೈತರಿಗೆ ತಲುಪುತ್ತಿವೆ. ಆದ್ದರಿಂದ ವಿಶ್ವವಿದ್ಯಾಲಯವು ರೈತರಲ್ಲಿನ ತಂತ್ರಜ್ಞಾನ ಅಳವಡಿಕೆಯ ಕುರಿತು ಅಧ್ಯಯನವನ್ನು ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಮಸ್ಕಿ ತಾಲ್ಲೂಕಿನ ಗುಡಿಹಾಳ ಗ್ರಾಮದ ಶಿವಕುಮಾರ ಪಾಟೀಲ ಅವರು ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ರಾಯಚೂರು ಕೃಷಿ ವಿಜ್ಞಾನ ಕೇಂದ್ರ ಪ್ರಾಯೋಜಿತ ‘2025ರ ಕೃಷಿರತ್ನ’ ಪ್ರಶಸ್ತಿ ಹಾಗೂ ಚಿನ್ನದ ಪದಕ ಬಹುಮಾನ ನೀಡಿ ಗೌರವಿಸಲಾಯಿತು.</p>.<p>ವಿಶ್ವವಿದ್ಯಾಲಯದ ಅತ್ಯುತ್ತಮ ಶಿಕ್ಷಕ, ಸಂಶೋಧನಾ ವಿಜ್ಞಾನಿ, ವಿಸ್ತರಣಾ ವಿಜ್ಞಾನಿ, ಕ್ಷೇತ್ರ ಅಧೀಕ್ಷಕ, ಸೇವಾ ಸಿಬ್ಬಂದಿ, ಕ್ಷೇತ್ರ ಸಹಾಯಕ ಹಾಗೂ ಅತ್ಯುತ್ತಮ ಕೃಷಿ ಕಾರ್ಮಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.</p>.<p>ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಬಿ.ವಿ.ಪಾಟೀಲ, ನಿವೃತ್ತ ಡೀನ್ ಸಿ.ವಿ.ಪಾಟೀಲ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಮಲ್ಲೇಶ ಕೊಲಿಮಿ, ವಿಶ್ವವಿದ್ಯಾಲಯದ ಅಧಿಕಾರಿಗಳು, ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>