<p><strong>ರಾಯಚೂರು</strong>: ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ನ (ಎಐಡಿಎಸ್ಒ) ಜಿಲ್ಲಾ ಘಟಕದಿಂದ ಭಾನುವಾರ ನಗರದ ಅಂಬೇಡ್ಕರ್ ವೃತ್ತದ ಎದರು ಪ್ರತಿಭಟನಾ ಸಮಾವೇಶ ನಡೆಸಿದರು.</p>.<p>ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಐಡಿಎಸ್ಒ ರಾಜ್ಯ ಘಟಕದ ಕಾರ್ಯದರ್ಶಿ ಅಜಯ ಕಾಮತ್ ಮಾತನಾಡಿ, ‘ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕಾಗಿಯೇ ಸರ್ಕಾರ ಅಧಿಕೃತ ಸುತ್ತೋಲೆಗಳನ್ನು ಹೊರಡಿಸುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಾದ ಕೆಕೆಆರ್ಡಿಬಿ ನಿಧಿಯನ್ನು ಶಾಲೆ ಮುಚ್ಚಲು ಬಳಸುತ್ತಿರುವುದು ಖಂಡನೀಯ’ ಎಂದು ಆಕ್ರೋಶ ಹೊರಹಾಕಿದರು.</p>.<p>ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಂ. ಆರ್. ಬೇರಿ ಮಾತನಾಡಿ, ‘ಬಡವರ ಮಕ್ಕಳಿಂದ ಶಿಕ್ಷಣವನ್ನು ಕಸಿದುಕೊಂಡು, ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಸರ್ಕಾರದ ಈ ನೀತಿಯನ್ನು ಕೂಡಲೇ ಕೈಬಿಡಬೇಕು’ ಎಂದು ಆಗ್ರಹಿಸಿದರು.</p>.<p>ನಿವೃತ್ತ ಪ್ರಾಂಶುಪಾಲ ಬೂದೆಪ್ಪ, ಕಲ್ಯಾಣ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗನಾಥ, ಎಐಯುಟಿಯುಸಿ ರಾಜ್ಯ ಘಟಕದ ಉಪಾಧ್ಯಕ್ಷ ವೀರೇಶ ಎನ್. ಎಸ್., ಗ್ರಾಮ ಪಂಚಾಯಿತಿ ಸದಸ್ಯ ವೀರೇಶ ಯಾದವ ಮಾತನಾಡಿದರು.</p>.<p>ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜ, ಪ್ರಮುಖರಾದ ಕಲ್ಯಾಣ ಕುಮಾರ, ನಾಗನಗೌಡ, ಜಗದೀಶ, ರಫೀಕ್, ತಿಮ್ಮಪ್ಪ, ಮಂಜುನಾಥ ಗುತ್ತೇದಾರ, ಬಶೀರ್ ಅಹ್ಮದ್ ಹೊಸಮನಿ, ನರಸಪ್ಪ, ಆಂಜನೇಯ, ಮಹೇಶ, ಚನ್ನಬಸವ ಜಾನೇಕಲ್, ಹಯ್ಯಾಳಪ್ಪ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ನ (ಎಐಡಿಎಸ್ಒ) ಜಿಲ್ಲಾ ಘಟಕದಿಂದ ಭಾನುವಾರ ನಗರದ ಅಂಬೇಡ್ಕರ್ ವೃತ್ತದ ಎದರು ಪ್ರತಿಭಟನಾ ಸಮಾವೇಶ ನಡೆಸಿದರು.</p>.<p>ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಐಡಿಎಸ್ಒ ರಾಜ್ಯ ಘಟಕದ ಕಾರ್ಯದರ್ಶಿ ಅಜಯ ಕಾಮತ್ ಮಾತನಾಡಿ, ‘ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕಾಗಿಯೇ ಸರ್ಕಾರ ಅಧಿಕೃತ ಸುತ್ತೋಲೆಗಳನ್ನು ಹೊರಡಿಸುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಾದ ಕೆಕೆಆರ್ಡಿಬಿ ನಿಧಿಯನ್ನು ಶಾಲೆ ಮುಚ್ಚಲು ಬಳಸುತ್ತಿರುವುದು ಖಂಡನೀಯ’ ಎಂದು ಆಕ್ರೋಶ ಹೊರಹಾಕಿದರು.</p>.<p>ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಂ. ಆರ್. ಬೇರಿ ಮಾತನಾಡಿ, ‘ಬಡವರ ಮಕ್ಕಳಿಂದ ಶಿಕ್ಷಣವನ್ನು ಕಸಿದುಕೊಂಡು, ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಸರ್ಕಾರದ ಈ ನೀತಿಯನ್ನು ಕೂಡಲೇ ಕೈಬಿಡಬೇಕು’ ಎಂದು ಆಗ್ರಹಿಸಿದರು.</p>.<p>ನಿವೃತ್ತ ಪ್ರಾಂಶುಪಾಲ ಬೂದೆಪ್ಪ, ಕಲ್ಯಾಣ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗನಾಥ, ಎಐಯುಟಿಯುಸಿ ರಾಜ್ಯ ಘಟಕದ ಉಪಾಧ್ಯಕ್ಷ ವೀರೇಶ ಎನ್. ಎಸ್., ಗ್ರಾಮ ಪಂಚಾಯಿತಿ ಸದಸ್ಯ ವೀರೇಶ ಯಾದವ ಮಾತನಾಡಿದರು.</p>.<p>ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜ, ಪ್ರಮುಖರಾದ ಕಲ್ಯಾಣ ಕುಮಾರ, ನಾಗನಗೌಡ, ಜಗದೀಶ, ರಫೀಕ್, ತಿಮ್ಮಪ್ಪ, ಮಂಜುನಾಥ ಗುತ್ತೇದಾರ, ಬಶೀರ್ ಅಹ್ಮದ್ ಹೊಸಮನಿ, ನರಸಪ್ಪ, ಆಂಜನೇಯ, ಮಹೇಶ, ಚನ್ನಬಸವ ಜಾನೇಕಲ್, ಹಯ್ಯಾಳಪ್ಪ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>