ದಿನದಿಂದ ದಿನಕ್ಕೆ ಹೋರಾಟವು ವ್ಯಾಪಕವಾಗುತ್ತಿದ್ದು, ವಿವಿಧ ಸಂಘ–ಸಂಸ್ಥೆಗಳು ಬೆಂಬಲ ಸೂಚಿಸಿ ಧರಣಿಯಲ್ಲಿ ಪಾಲ್ಗೊಳ್ಳುತ್ತಿವೆ. ಹಿಂದುಳಿದ ಪ್ರದೇಶದಲ್ಲಿ ಕೇಂದ್ರದ ಸಂಸ್ಥೆಯೊಂದನ್ನು ಸ್ಥಾಪಿಸಬೇಕು ಎಂದು ನಂಜುಂಡಪ್ಪ ವರದಿಯಲ್ಲಿ ಹೇಳಲಾಗಿತ್ತು. ಆದರೆ ರಾಯಚೂರಿಗೆ ಬರಬೇಕಿದ್ದ ಐಐಟಿ ಕೈ ತಪ್ಪಿಸಲಾಗಿದೆ. ಈಗ ಏಮ್ಸ್ ಸಂಸ್ಥೆ ರಾಯಚೂರಿನಲ್ಲಿ ಸ್ಥಾಪಿಸುವುದಕ್ಕೆ ಅವಕಾಶವಿದ್ದು, ರಾಜ್ಯ ಸರ್ಕಾರದ ಮೇಲೆ ಜಿಲ್ಲೆಯ ರಾಜಕಾರಣಿಗಳು ಒತ್ತಡ ಹಾಕಬೇಕು. ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗುವವರೆಗೂ ಧರಣಿ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.