ರಾಯಚೂರು ಅತ್ಯಂತ ಹಿಂದುಳಿದ ಜಿಲ್ಲೆಯಾಗಿದೆ. ಕೇಂದ್ರ ಸರ್ಕಾರವೇ ಮಹಾತ್ವಾಕಾಂಕ್ಷಿ ಜಿಲ್ಲೆ ಎಂದು ಘೋಷಣೆ ಮಾಡಿದೆ. ಇಲ್ಲಿ ಏಮ್ಸ್ ಸ್ಥಾಪನೆಗೆ ಅಗತ್ಯವಿರುವ ಮೂಲಸೌಕರ್ಯಗಳು ಲಭ್ಯವಿದೆ. ಏಮ್ಸ್ ಹೋರಾಟ ಸಮಿತಿಯು 638 ದಿನಗಳಿಂದ ಧರಣಿ ನಡೆಸಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಪ್ಪಿ ಪತ್ರ ಬರೆದಿದ್ದಾರೆ ಎಂದು ಉಭಯ ಸಂಸದರು ಸಚಿವರಿಗೆ ಮನವರಿಕೆ ಮಾಡಿದರು ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.