<p><strong>ರಾಯಚೂರು: </strong>ಕೊವೀಡ್-19 ಮಹಾಮಾರಿಯಿಂದ ತೊಂದರೆಗೆ ಒಳಪಟ್ಟು ವಲಸೆ ಕಾರ್ಮಿಕರು, ಬಡವರು ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ಲಾಕ್ಡೌನ್ ಘೋಷಣೆಯಾಗಿರುವುದರಿಂದ ಕಾರ್ಮಿಕರು ಕೆಲಸದಿಂದ ಹೊರದೂಡಲ್ಪಟ್ಟಿದ್ದಾರೆ. 60 ದಿನಗಳಿಂದ ಎಷ್ಟೋ ಕೂಲಿ ಕಾರ್ಮಿಕರು ಊಟವಿಲ್ಲದೆ, ಇರಲು ವಸತಿ ವ್ಯವಸ್ಥೆ ಇಲ್ಲದೆ ತಮ್ಮ ತಮ್ಮ ರಾಜ್ಯಗಳಿಗೆ ವಾಪಸ್ ಹೊರಟಿದ್ದಾರೆ. ಲಕ್ಷಾಂತರ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ.</p>.<p>ಅಸಂಘಟಿತ ಕ್ಷೇತ್ರಗಳಾದ ಗಾರ್ಮೆಂಟ್ಸ್ಗಳಲ್ಲಿ, ಸಣ್ಣ ಉದ್ಯಮಗಳಲ್ಲಿ, ಅಂಗಡಿ - ಮಾಲ್ಗಳಲ್ಲಿ ದುಡಿಯುತ್ತಿದ್ದವರು, ಮನೆ ಕೆಲಸದವರು, ಸಣ್ಣ ವ್ಯಾಪಾರಿಗಳು ಕೆಲಸ ಕಳೆದುಕೊಂಡು ಸಂಕಷ್ಠದಲ್ಲಿದ್ದಾರೆ. ಲಾಕ್ ಡೌನ್ನಿಂದ ಮುಚ್ಚಲ್ಪಟ್ಟಿದ ಮದ್ಯದಂಗಡಿಗಳು ಈಗ ತೆರವುಗೊಂಡಿದ್ದು ಇದರಿಂದ ಹೆಣ್ಣುಮಕ್ಕಳ ಮೇಲೆ ಜೀವನ ಹಿಂದಿನಂತೆಯೇಸಂಕಷ್ಟಮಯವಾಗಿದೆ. ಕೌಟುಂಬಿಕ ದೌರ್ಜನ್ಯಗಳು ಹೆಚ್ಚಾಗಿರುವುದು ಕಂಡುಬಂದಿದೆ.</p>.<p>ಆದ್ದರಿಂದಲೇ ಮಹಿಳೆಯರ ಬಹು ವರ್ಷಗಳ ಬೇಡಿಕೆಯಾದ ಮದ್ಯಪಾನ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.</p>.<p>ಕೌಟುಂಬಿಕ ದೌರ್ಜನ್ಯಗಳನ್ನು ತಡೆಗಟ್ಟಲು ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಿ , ಮದ್ಯಮಾರಾಟವನ್ನು ಶಾಶ್ವತವಾಗಿ ನಿಲ್ಲಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಸಂಚಾಲಕಿ ಉಮಾ ಮಹೇಶ್ವರಿ, ಸಂಗೀತ, ಗಾಯತ್ರಿ, ಮೀನಾಕ್ಷಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಕೊವೀಡ್-19 ಮಹಾಮಾರಿಯಿಂದ ತೊಂದರೆಗೆ ಒಳಪಟ್ಟು ವಲಸೆ ಕಾರ್ಮಿಕರು, ಬಡವರು ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ಲಾಕ್ಡೌನ್ ಘೋಷಣೆಯಾಗಿರುವುದರಿಂದ ಕಾರ್ಮಿಕರು ಕೆಲಸದಿಂದ ಹೊರದೂಡಲ್ಪಟ್ಟಿದ್ದಾರೆ. 60 ದಿನಗಳಿಂದ ಎಷ್ಟೋ ಕೂಲಿ ಕಾರ್ಮಿಕರು ಊಟವಿಲ್ಲದೆ, ಇರಲು ವಸತಿ ವ್ಯವಸ್ಥೆ ಇಲ್ಲದೆ ತಮ್ಮ ತಮ್ಮ ರಾಜ್ಯಗಳಿಗೆ ವಾಪಸ್ ಹೊರಟಿದ್ದಾರೆ. ಲಕ್ಷಾಂತರ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ.</p>.<p>ಅಸಂಘಟಿತ ಕ್ಷೇತ್ರಗಳಾದ ಗಾರ್ಮೆಂಟ್ಸ್ಗಳಲ್ಲಿ, ಸಣ್ಣ ಉದ್ಯಮಗಳಲ್ಲಿ, ಅಂಗಡಿ - ಮಾಲ್ಗಳಲ್ಲಿ ದುಡಿಯುತ್ತಿದ್ದವರು, ಮನೆ ಕೆಲಸದವರು, ಸಣ್ಣ ವ್ಯಾಪಾರಿಗಳು ಕೆಲಸ ಕಳೆದುಕೊಂಡು ಸಂಕಷ್ಠದಲ್ಲಿದ್ದಾರೆ. ಲಾಕ್ ಡೌನ್ನಿಂದ ಮುಚ್ಚಲ್ಪಟ್ಟಿದ ಮದ್ಯದಂಗಡಿಗಳು ಈಗ ತೆರವುಗೊಂಡಿದ್ದು ಇದರಿಂದ ಹೆಣ್ಣುಮಕ್ಕಳ ಮೇಲೆ ಜೀವನ ಹಿಂದಿನಂತೆಯೇಸಂಕಷ್ಟಮಯವಾಗಿದೆ. ಕೌಟುಂಬಿಕ ದೌರ್ಜನ್ಯಗಳು ಹೆಚ್ಚಾಗಿರುವುದು ಕಂಡುಬಂದಿದೆ.</p>.<p>ಆದ್ದರಿಂದಲೇ ಮಹಿಳೆಯರ ಬಹು ವರ್ಷಗಳ ಬೇಡಿಕೆಯಾದ ಮದ್ಯಪಾನ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.</p>.<p>ಕೌಟುಂಬಿಕ ದೌರ್ಜನ್ಯಗಳನ್ನು ತಡೆಗಟ್ಟಲು ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಿ , ಮದ್ಯಮಾರಾಟವನ್ನು ಶಾಶ್ವತವಾಗಿ ನಿಲ್ಲಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಸಂಚಾಲಕಿ ಉಮಾ ಮಹೇಶ್ವರಿ, ಸಂಗೀತ, ಗಾಯತ್ರಿ, ಮೀನಾಕ್ಷಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>