ಪಟ್ಟಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನೆಪವೊಡ್ಡಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಇದರಿಂದ ಜಿಲ್ಲಾಡಳಿತಕ್ಕೆ ತುಕ್ಕು ಹಿಡಿದಂತಾಗಿದೆ. ಆಗೊಮ್ಮೆ ಹೀಗೊಮ್ಮೆ ಜಿಲ್ಲೆಗೆ ಬರುವ ಉಸ್ತುವಾರಿ ಸಚಿವರಿಂದ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಿಸುವುದು ಸಾಧ್ಯವೇ ಎಂದು ಪ್ರಶ್ನಿಸಿದರು.