<p><strong>ಸಿರವಾರ</strong>: ‘ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯದಿಂದಾಗಿ ಅಧಿಕಾರಿಗಳಿಗೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದು, ಇದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ‘ ಎಂದು ಮಾಜಿ ಶಾಸಕ ಹನುಮಂತಪ್ಪ ಆಲ್ಕೋಡ್ ಆರೋಪಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನೆಪವೊಡ್ಡಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಇದರಿಂದ ಜಿಲ್ಲಾಡಳಿತಕ್ಕೆ ತುಕ್ಕು ಹಿಡಿದಂತಾಗಿದೆ. ಆಗೊಮ್ಮೆ ಹೀಗೊಮ್ಮೆ ಜಿಲ್ಲೆಗೆ ಬರುವ ಉಸ್ತುವಾರಿ ಸಚಿವರಿಂದ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಿಸುವುದು ಸಾಧ್ಯವೇ ಎಂದು ಪ್ರಶ್ನಿಸಿದರು.</p>.<p>ಜಿಲ್ಲೆ ನಡೆಯುತ್ತಿರುವ 9ಎ ಕಾಲುವೆ ಸೇರಿದಂತೆ ನೀರಾವರಿ ಕಾಮಗಾರಿಗಳಿಗೆ ಯಾವುದೇ ಟೆಂಡರ್ ಇಲ್ಲದ ಕಾರಣ ಕಳಪೆ, ಅಕ್ರಮವಾಗಿ ನಡೆಯುತ್ತಿದ್ದು ಸ್ಥಳೀಯ ಜನಪ್ರತಿನಿಧಿಗಳು ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಹಣ ಪಡೆದು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಜಿಲ್ಲೆಯ ಅಂಗನವಾಡಿ ಮಕ್ಕಳ, ಶಾಲಾ ಮಕ್ಕಳಿಗೆ ನೀಡುವ ಆಹಾರ ಧಾನ್ಯ, ಮೊಟ್ಟೆಯನ್ನು ಕಸಿದುಕೊಂಡು ಅನ್ನ ದಾಸೋಹ ನಡೆಸುವ ಹಂತಕ್ಕೆ ವ್ಯವಸ್ಥೆ ತಲುಪಿದೆ.</p>.<p>ಮುಂದಾದರೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಸಿ ರೂಂ ಗಳಿಂದ ಹೊರಬಂದು ಸಾರ್ವಜನಿಕರಿಗೆ ಸೇವೆ ಮಾಡಬೇಕಾಗಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<p>ಎಂ.ಪ್ರಕಾಶಪ್ಪ, ಪರಶುರಾಮ ಸರೋದೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ‘ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯದಿಂದಾಗಿ ಅಧಿಕಾರಿಗಳಿಗೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದು, ಇದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ‘ ಎಂದು ಮಾಜಿ ಶಾಸಕ ಹನುಮಂತಪ್ಪ ಆಲ್ಕೋಡ್ ಆರೋಪಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನೆಪವೊಡ್ಡಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಇದರಿಂದ ಜಿಲ್ಲಾಡಳಿತಕ್ಕೆ ತುಕ್ಕು ಹಿಡಿದಂತಾಗಿದೆ. ಆಗೊಮ್ಮೆ ಹೀಗೊಮ್ಮೆ ಜಿಲ್ಲೆಗೆ ಬರುವ ಉಸ್ತುವಾರಿ ಸಚಿವರಿಂದ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಿಸುವುದು ಸಾಧ್ಯವೇ ಎಂದು ಪ್ರಶ್ನಿಸಿದರು.</p>.<p>ಜಿಲ್ಲೆ ನಡೆಯುತ್ತಿರುವ 9ಎ ಕಾಲುವೆ ಸೇರಿದಂತೆ ನೀರಾವರಿ ಕಾಮಗಾರಿಗಳಿಗೆ ಯಾವುದೇ ಟೆಂಡರ್ ಇಲ್ಲದ ಕಾರಣ ಕಳಪೆ, ಅಕ್ರಮವಾಗಿ ನಡೆಯುತ್ತಿದ್ದು ಸ್ಥಳೀಯ ಜನಪ್ರತಿನಿಧಿಗಳು ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಹಣ ಪಡೆದು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಜಿಲ್ಲೆಯ ಅಂಗನವಾಡಿ ಮಕ್ಕಳ, ಶಾಲಾ ಮಕ್ಕಳಿಗೆ ನೀಡುವ ಆಹಾರ ಧಾನ್ಯ, ಮೊಟ್ಟೆಯನ್ನು ಕಸಿದುಕೊಂಡು ಅನ್ನ ದಾಸೋಹ ನಡೆಸುವ ಹಂತಕ್ಕೆ ವ್ಯವಸ್ಥೆ ತಲುಪಿದೆ.</p>.<p>ಮುಂದಾದರೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಸಿ ರೂಂ ಗಳಿಂದ ಹೊರಬಂದು ಸಾರ್ವಜನಿಕರಿಗೆ ಸೇವೆ ಮಾಡಬೇಕಾಗಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<p>ಎಂ.ಪ್ರಕಾಶಪ್ಪ, ಪರಶುರಾಮ ಸರೋದೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>